LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸುರಂಗ ಮಾರ್ಗದಲ್ಲಿ‌ ಮತ್ತೆ ಗುಡ್ಡ ಕುಸಿತ


ಕಾರವಾರ: ನಗರದ ಲಂಡನ್ ಬ್ರೀಡ್ಜ್​​ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಸುರಂಗ ಮಾರ್ಗದ ಬಳಿ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ಮುಂಜಾಗೃತಾ ಕ್ರಮವಾಗಿ ಒಂದು ಸುರಂಗ ಮಾರ್ಗದಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.


ಗುಡ್ಡ ಕುಸಿತದಿಂದ ಈ ಹಿಂದೆ ಕೆಲ‌ವು ದಿನ ಬಂದ್ ಆಗಿದ್ದ ಸುರಂಗ‌ ಮಾರ್ಗದ ಇನ್ನೊಂದು ಬದಿಯಲ್ಲಿ ಶನಿವಾರ ಬೆಳಗ್ಗೆ ಮತ್ತೆ ಬಂಡೆ‌ಕಲ್ಲು ಹಾಗೂ‌ ಮಣ್ಣು ಕುಸಿದಿದೆ. ಇದರಿಂದ ಅಂಕೋಲಾದಿಂದ‌ ಕಾರವಾರ ನಗರಕ್ಕೆ ಸಂಪರ್ಕ‌ ಕಲ್ಪಿಸುವ ಸುರಂಗದ ಒಂದು ಬದಿಯ ಸಂಚಾರ ಬಂದ್ ಮಾಡಲಾಗಿದೆ.


ಸದ್ಯ ಐಆರ್​ಬಿ ಕಂಪನಿಯಿಂದ ಮಣ್ಣು, ಕಲ್ಲುಗಳ ತೆರವು ಮಾಡಿದ್ದು ಮುಂಜಾಗೃತಾ ಕ್ರಮವಾಗಿ ಈ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ಹಿಂದಿನ ಹಳೆಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.








''ಐಆರ್​ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಂಗದ ಬಳಿ ಪದೆ ಪದೇ ಗುಡ್ಡ ಕುಸಿತವಾಗುತ್ತಿದೆ. ಮಣ್ಣು, ಕಲ್ಲು ಸಡಿಲಗೊಂಡು ಮಳೆಗಾಲದಲ್ಲಿ ಹೆದ್ದಾರಿಗೆ ಬೀಳುವುದರಿಂದ ನಿತ್ಯ ಸಂಚಾರ ಮಾಡುವ ಸವಾರರಿಗೆ ಜೀವ ಭಯ ಕಾಡುವಂತಾಗಿದೆ. ಕೂಡಲೇ ಈ ಭಾಗದಲ್ಲಿ ಗುಡ್ಡ ಕುಸಿಯುವುದನ್ನು ಗುತ್ತಿಗೆ ಪಡೆದ ಕಂಪನಿ ತಡೆಗಟ್ಟಲು ಅಗತ್ಯ ಕ್ರಮ‌ಕೈಗೊಳ್ಳುವಂತೆ ನಗರಸಭೆ ಮಾಜಿ‌ ಉಪಾಧ್ಯಕ್ಷ ಪಿ.ಪಿ ನಾಯ್ಕ ಆಗ್ರಹಿಸಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್