Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ ಗ್ರೂಪ್ ನೌಕರರ ನೇಮಕಕ್ಕೆ ಮನವಿ 

ಬಳ್ಳಾರಿ,ಮೇ.೧೫: ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಡಿ ಗ್ರೂಪ್ ನೌಕರರನ್ನು ಹೆಚ್ಚಳ ಮಾಡುವಂತೆ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕರಿಗೆ ಎಐಯುಟಿಯುಸಿಗೆ ಸಂಯೋಜನೆಗೊAಡ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಗುತ್ತಿಗೆ ನೌಕರರ ಸಂಘವು ಮನವಿ ಸಲ್ಲಿಸಿತು.
      ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ವಿಸ್ತರಣೆಯಾಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಇತ್ತೀಚಿನ ಕೆಲ ವರ್ಷಗಳಲ್ಲಿ ಟ್ರಾಮಾ ಕೇರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕೂಡ ಪ್ರಾರಂಭವಾಗಿವೆ. ದಿನಕ್ಕೆ ಸುಮಾರು ೨೦೦೦ ಹೊರ ರೋಗಿಗಳು ಇಲ್ಲಿ ಬರುತ್ತಾರೆ ಎಂಬುವ ಅಂದಾಜಿದೆ. ಸುತ್ತಾಮುತ್ತಾ ಜಿಲ್ಲೆಗಳಿಂದ, ನೆರೆಯ ಆಂಧ್ರಪ್ರದೇಶದಿAದ ಕೂಡ ರೋಗಿಗಳು ಬರುತ್ತಾರೆ. ಇಂತಹ ಸಂದರ್ಭದಲ್ಲಿ ದೊಡ್ಡ ಸಂಖ್ಯೆ, ಸುಮಾರು ೭೫೦-೯೦೦ ಡಿ ಗ್ರೂಪ್ ನೌಕರರ ಅವಶ್ಯಕತೆಯಿದೆ. ಆದರೆ ಇಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕೇವಲ ೪೫೦-೫೦೦. ಅದು ಕೂಡ ಹೊರಗುತ್ತಿಗೆ ಆಧಾರದ ಮೇಲೆ. ಇದರ ಪರಿಣಾಮವಾಗಿ ಇರುವ ಕಾರ್ಮಿಕರ ಮೇಲೆ ಒತ್ತಡ ತೀವ್ರವಾಗಿದೆ. ಒಬ್ಬ ಕಾರ್ಮಿಕ, ೨-೩ ಕಾರ್ಮಿಕರ ಕೆಲಸವನ್ನು ಮಾಡಬೇಕಾಗಿದೆ. ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸಾಧ್ಯವಾಗುವುದಿಲ್ಲ. ಈ ಹಿನ್ನಲೆಯಲ್ಲಿ ಆರೋಗ್ಯದಂತಹ ಅವಶ್ಯಕ ಸೇವೆಯ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ಕೂಡಲೆ ಅವಶ್ಯಕವಿರುವ ಹೆಚ್ಚುವರಿ ಡಿ ಗ್ರೂಪ್ ಕಾರ್ಮಿಕರನ್ನು ನೇಮಕ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದೆ.
      ಇನ್ನು ಅನೇಕ ಕಾರ್ಮಿಕರು ನೇಮಕಾತಿ ಪತ್ರ ಸಿಗದೆ ಇರುವುದು, ಪಿಎಫ್ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಈ ಕೊರತೆಗಳನ್ನು ನೀಗಿಸಲು ಗುತ್ತಿಗೆದಾರರ ಜೊತೆ ಸಭೆ ಆಗುವುದು ಕೂಡ ಅವಶ್ಯಕತೆ ಇದೆ.  ಇದಲ್ಲದೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲದೆ. ಊಟ ಮಾಡಲು, ವಸ್ತç ಬದಲಿಸಲು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*