LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ*

ಬಳ್ಳಾರಿ, ಮೇ 20:: ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ 101 ದಲಿತ ಕುಟುಂಬಗಳಿಗೆ ಶೀಘ್ರ ವಸತಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
2014-15ನೇ ಸಾಲಿನಲ್ಲಿ ಗ್ರಾಮದ ಭೀಮನೇನಿ ಸೋಮಪ್ಪ ಅವರ ವಶದಲ್ಲಿದ್ದ 135 ಎಕರೆ ಜಮೀನನ್ನು ಹೋರಾಟದ ಮೂಲಕ ಕಂದಾಯ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಗ್ರಾಮದಲ್ಲಿನ ದಲಿತ ಸಮುದಾಯ ಆರ್ಥಿಕ ಬಹಿಷ್ಕಾರಕ್ಕೆ ಒಳಗಾಗಿದ್ದು, ಸರ್ಕಾರದಿಂದ ಆರ್ಥಿಕ ಭದ್ರತೆ, ನೇರ ಸಾಲ ಹಾಗೂ ವಸತಿ ನಿವೇಶನ ನೀಡುವಂತೆ ಬೇಡಿಕೆ ಇಡಲಾಗಿತ್ತು ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.
ಈ ಹಿಂದೆ ಆದಿ ಜಾಂಬವ ನಿಗಮದಿಂದ 86 ಕುಟುಂಬಗಳಿಗೆ ತಲಾ ₹1 ಲಕ್ಷ ನೇರ ಸಾಲ ಮಂಜೂರಾಗಿದ್ದರೂ, ವಸತಿ ನಿವೇಶನ ಮಂಜೂರಿನ ವಿಚಾರದಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಳದಿಂದ ಹಲವಾರು ಕುಟುಂಬಗಳು ಒಂದೇ ಮನೆಯಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
 ವಾಸಿಸಲು ಸೂಕ್ತ ಜಾಗದ ಕೊರತೆಯಿಂದ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಗ್ರಾಮಸ್ಥರು ಡಾ. ಗುರುಮೂರ್ತಿ ಅವರ ಜಮೀನನ್ನು ವಸತಿ ನಿವೇಶನಕ್ಕಾಗಿ ಖರೀದಿಸಲು ಮಾತುಕತೆ ನಡೆಸಿದ್ದು, ಸುಮಾರು 3 ಎಕರೆ 94 ಸೆಂಟ್ಸ್ ಭೂಮಿಗೆ ₹2.56 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. 
ಇಷ್ಟೊಂದು ಮೊತ್ತವನ್ನು ಬಡ ಕುಟುಂಬಗಳು ಭರಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರವೇ ಮಧ್ಯಪ್ರವೇಶಿಸಿ ನಿವೇಶನ ಮಂಜೂರು ಮಾಡಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಮಾತನಾಡಿ, ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿ ಶೀಘ್ರ ವಸತಿ ನಿವೇಶನ ಮಂಜೂರು ಮಾಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಮಕೃಷ್ಣ, ನೀಲಪ್ಪ ಪೇಂಟರ್, ಸೋಮಯ್ಯ, ಈರಣ್ಣ, ವೆಂಕಟಸ್ವಾಮಿ, ಕೃಷ್ಣ, ಪೆದ್ದಣ್ಣ, ಮೋಹನ್ ರಾಜ್, ನವೀನ್ ಕುಮಾರ್, ಮಲ್ಲಮ್ಮ, ಲಕ್ಷ್ಮಿ, ಸರಸ್ವತಿ, ಸರೋಜಮ್ಮ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ