LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಬ್ಬರು ಐಎಸ್​ಐಎಸ್​ ಉಗ್ರರ ರಾಂಚಿಯ ಲಾಡ್ಜ್​ನಲ್ಲಿ ಬಂಧನ

ರಾಂಚಿ: ದೆಹಲಿ ಪೊಲೀಸ್​ ವಿಶೇಷ ಘಟಕದ ಸಹಯೋಗದೊಂದಿಗೆ ಜಾರ್ಖಂಡ್​ ಭಯೋತ್ಪಾದಕ ವಿರೋಧಿ ಪಡೆ (ಎಟಿಎಸ್​) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಐಎಸ್​ಐಎಸ್​ (ಐಸಿಸ್​) ಉಗ್ರರನ್ನು ರಾಂಚಿಯ ಲಾಡ್ಜ್​ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಲೋವರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಇಸ್ಲಾಂ ನಗರದ ತಬಾರಕ್ ಲಾಡ್ಜ್‌ನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆಶರ್​ ಡ್ಯಾನಿಶ್​ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈತ ಬೊಕಾರೊ ಜಿಲ್ಲೆಯ ಪೆಟ್ವಾರ್​​ ನಿವಾಸಿ ಎಂದು ತಿಳಿದು ಬಂದಿದ್ದು, ಬಹುಕಾಲದಿಂದ ಲಾಡ್ಜ್​ನಲ್ಲಿ ವಾಸಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆರೋಪಿಯ ಕುರಿತು ನಿಖರ ಸುಳಿವು ಲಭ್ಯವಾದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್​ ವಿಶೇಷ ಘಟಕ ಜಾರ್ಖಂಡ್​ ಎಟಿಎಸ್​ ಜೊತೆಗೂಡಿ ಲಾಡ್ಜ್​ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯಲ್ಲಿ ಆಶರ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಈತನ ಕೋಣೆಯಲ್ಲಿದ್ದ ಹಲವು ಎಲೆಕ್ಟ್ರಾನಿಕ್​ ಸಾಧನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಅಶರ್​ ಐಎಸ್​ಐಎಸ್​ ಮಾಡ್ಯೂಲ್‌ನೊಂದಿಗೆ ಸಂಪರ್ಕದಲ್ಲಿದ್ದು, ಇತರೆ ಅನೇಕ ಅನುಮಾನಾಸ್ಪದ ಕಾರ್ಯಾಚರಣೆಗಳಲ್ಲಿ ಈತನ ಸಂಪರ್ಕವಿರುವ ಕುರಿತು ಅನುಮಾನವಿದೆ. ಈತ ದೆಹಲಿಯಲ್ಲಿ ದಾಖಲಾದ ಪ್ರಕರಣದಲ್ಲೂ ಬೇಕಾಗಿದ್ದ. ಈತನ ಬಳಿ ಇದ್ದ ಅನೇಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, ಜಾಲದ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದೆಹಲಿ ಪೊಲೀಸ್​ ವಿಶೇಷ ಘಟಕ ಆಶರ್​ನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದುಕೊಂಡು ಹೋಗಿದೆ. ಜಾರ್ಖಂಡ್​ ಅಥವಾ ದೇಶದ ಇತರೆ ಭಾಗದಲ್ಲಿ ಏನಾದರೂ ವಿಧ್ವಂಸಕ ಕೃತ್ಯಕ್ಕೆ ಯೋಜನೆ ನಡೆದಿತ್ತಾ ಎಂಬ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದು, ಈತನ ಕುರಿತು ಹೆಚ್ಚಿನ ಮಾಹಿತಿಗೆ ಲಾಡ್ಜ್​ ಸಿಬ್ಬಂದಿಯನ್ನು ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್