LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಲೆಗಳಿಂದೆ ... ನಮ್ಮ ಸಂಸ್ಕೃತಿಯನ್ನು ಉಳಿಸೋಣ... ಡಾ. ರಾಜು ಜಡಾರ್

 
ಬಳ್ಳಾರಿ,.27:... ಕಲೆಗಳ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಬೇಕು... ಆಗಲೇ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾದ್ಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಸಚಿವರು ಡಾ. ರಾಜು ಜಡಾರ್ ತಿಳಿಸಿದರು. ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರ ದೊಂದಿಗೆ ಸೋಮವಾರ ರಾತ್ರಿ ಹೊಂಗಿರಣ ರಂಗ ಮಂದಿರದಲ್ಲಿ ಹಮ್ಮಿಕೊಂಡ ತುಂಗಾ ಅಧಿಕಮಾಸ ಸಾಂಸ್ಕ್ರತಿಕ ವೈಭವ 2026 ಕಾರ್ಯಕ್ರಮವನ್ನು ವಾದ್ಯಬಾರಿಸಿ ಉದ್ಗಾಟಿಸಿ ಮಾತನಾಡಿದರು. ನಮ್ಮ ದೇಶ, ನಾಡಿನ ಕಲೆಗಳು.. ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ನಮ್ಮೆಲ್ಲರದು ಎಂದು ಅವರು ಅಭಿಪ್ರಾಯಪಟ್ಟರು. ಹಿರಿಯ ರಂಗ ಕಲಾವಿದ ಎಂ.ರಾಮಂಜಿನೆಯುಲು ಕಳೆಗಳ ಉಳಿವಿಗೆ ಉದಯೋನ್ಮುಖ ಕಲಾವಿದರನ್ನು ಬೆಳಿಸಲು ಈ ಸಂಸ್ಥೆ ಮಾಡುತ್ತಿರುವ ಸೇವೆಯನ್ನೂ ಸ್ಮರಿಸಿದರು. ಕರ್ಣಾಟಕ ಕ್ರಿಯಾಶೀಲ ಶಿಕ್ಷಕರ ವೇದಿಕೆ ಜಿಲ್ಲಾ ಅಧ್ಯಕ್ಷರು ರವಿ ಚೆಳಗುರ್ಕಿ ಮಾತನಾಡಿ ಕಳಾದ ಹನ್ನೆರಡು ವರ್ಷದಿಂದ ತುಂಗ ಗಂಗಾ ಸಾಂಸ್ಕೃತಿಕ ಕಲಾ ಟ್ರಸ್ಟ್ ಕಲೆಗಳಿಗೆ, ಕಲಾ ಪ್ರದರ್ಶನಕ್ಕೆ ನೀಡುತ್ತಿರುವ ಪ್ರೋತ್ಸಾಹ  ಅಭಿನಂದ ನೀಯವೆಂದರು. ಕಲೆಗಳ ಪ್ರದರ್ಶನಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಇದೆ ಎಂದು ಹವ್ಯಾಸಿ ಕಲಾವಿದರ ಒಕ್ಕೂಟ ಜಿಲ್ಲಾ ಸಂಚಾಲಕರು ಜಿ. ಎಂ.ಚಂದ್ರಶೇಖರಯ್ಯ ಸ್ವಾಮಿ ಅವರು ನುಡಿದರು. ಅತಿಥಿ ಮಾನ್ಯರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಿದರು.  ಅನಂತರ ಶ್ರೀಜ. ಜೆ ತಂಡ ದಿಂದ ಪ್ರದರ್ಶಿಸಿದ ಸಮೂಹ ನೃತ್ಯ, ನಾಗರಾಜು ಅಮರಪುರ ತಂಡ ದಿಂದ ಯಾರಿಗೆ ಬೇಕು ನಿನ್ನ ಕವಿತೆ ಹಾಸ್ಯ ನಾಟಕ ಪ್ರೇಕ್ಷಕರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ವಾಣಿಜ್ಯ ಕೈಗಾರಿಕೆ ಸಂಸ್ಥೆಯ ಹಿರಿಯ ಉಪಾಧ್ಯಕ್ಷರು ದೊಡ್ಡನಗೌಡ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ನೇತ್ರಾವತಿ, ರವಿ, ಟಿ.ಶ್ರೀನಿವಾಸ್, ಕನೆಕಲ್ ಶ್ರೀಧರ,  ಶಿವರುದ್ರಯ್ಯ ಸ್ವಾಮಿ, ನಿವೃತ್ತ ಪ್ರಾಂಶುಪಾಲರಾದ ಕುಪ್ಪಗಲ್ ವೀರೇಶ್, ಉಪನ್ಯಾಸಕರಾದ ಮಂಜುನಾಥ್, ಕಲಾವಿದ ಸುಬ್ಬಣ್ಣ, ಆದೋನಿ ವೀಣ,ಶೇಷರೆಡ್ಡಿ, ವೀರೇಶ, ಗುರುಸ್ವಾಮಿ, ಪಂಪಾಪತಿ, ಹುಸೇನಸಾಬ, ಬಸವರಾಜ್ ಸ್ವಾಮಿ, ವೆಂಕಟೇಶಲು, ಮುಂತಾದವರು ಇದ್ದರು. ರಂಗ ಕಲಾವಿದ ನಾಗಭೂಷಣ್ ನಿರೂಪಿಸಿದರು. ನಾಗರಾಜ್ ಗೌಡ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್