LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೆಹಲಿ ವಿಧಾನಸಭಾ ಚುನಾವಣೆ; ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ: ಅರವಿಂದ್​ ಕೇಜ್ರಿವಾಲ್​

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದೆ ಇಲ್ಲ ಎಂದು ಅವರು ದೃಢಪಡಿಸಿದ್ದಾರೆ


ಕಾಂಗ್ರೆಸ್​ ಮತ್ತು ಎಎಪಿ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬ ಗಾಳಿ ಸುದ್ದಿಗೆ ಎಕ್ಸ್​ ಮೂಲಕ ಅವರು ಸ್ಪಷ್ಟನೆ ನೀಡಿರುವ ಕೇಜ್ರಿವಾಲ್​, ನಮ್ಮ ಪಕ್ಷ ಏಕಾಂಗಿಯಾಗಿ ಸ್ವಂತ ಬಲದ ಮೇಲೆ ಹೋರಾಟ ನಡೆಸಲಿದೆ. ಕಾಂಗ್ರೆಸ್​ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ಕಾಂಗ್ರೆಸ್​ ಮತ್ತು ಎಎಪಿ ಮೈತ್ರಿ ಮಾಡಿಕೊಳ್ಳಲಿವೆ. ಕಾಂಗ್ರೆಸ್​- ಎಎಪಿ ಮೈತ್ರಿ ಒಪ್ಪಂದವೂ ಅಂತಿಮ ಹಂತದಲ್ಲಿ ಇದೆ ಎಂಬ ಸುದ್ದಿಗಳು ಹರದಾಡಿದ್ದವು. ಈ ಎಲ್ಲ ಊಹಾಪೋಹಗಳಿಗೆ ಅರವಿಂದ ಕೇಜ್ರಿವಾಲ್​ ತೆರೆ ಎಳೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್