ಬೆಂಗಳೂರು, ಸೆಪ್ಟೆಂಬರ್ 27: ಈಗಾಗಲೇ ಮುಂಬೈ ಟು ಅಹಮದಾಬಾದ್ ಮಧ್ಯೆ ಬುಲೆಟ್ ರೈಲು ಯೋಜನೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೀಗಿರುವಾಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖವಾಗಿದೆ ಎಂದು ಹೇಳಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.