LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಿ: ಮಹೇಶ್ ಎಚ್.


ಕೊಪ್ಪಳ ಜುಲೈ 03: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕೆಂದು ಕೊಪ್ಪಳ ತಾಲೂಕ ಪಂಚಾಯತ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್. ಅವರು ಕರೆ ನೀಡಿದರು.
 ಕೊಪ್ಪಳ ತಾಲೂಕ ಸ್ವೀಪ್ ಸಮಿತಿ ಕೊಪ್ಪಳ ಹಾಗೂ ಇರಕಲ್ಲಗಡಾ ಗಾಮ ಪಂಚಾಯತಿ ಇವರಗಳ ಸಂಯುಕ್ತಾಶ್ರಯದಲ್ಲಿ ಗುರುವಾರ (ಜು. 02ರಂದು) ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾಲೇಜು ವಿದ್ಯಾರ್ಥಿಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
 ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳು, ಮತ್ತು ಇತರ ಅನರ್ಹ ಮತದಾರರನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್‌ಐಆರ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದರು. ಬೂತ್ ಮಟ್ಟದ ಅಧಿಕಾರಿಯು ಪ್ರತಿ ಮನೆಗೆ 03 ಬಾರಿ ಭೇಟಿ ನೀಡಲಿದ್ದಾರೆ. ಅಗತ್ಯ ಮಾಹಿತಿಯನ್ನು ಪ್ರತಿಯೊಬ್ಬರು ಸಲ್ಲಿಸಲು ಇದೊಂದು ಸದಾವಕಾಶ ಹಾಗೂ ಹೊಸದಾಗಿ ಸೇರ್ಪಡೆಗೆ ಅವಕಾಶವಿದೆ ಎಂದರು.
 ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾವು ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ಗ್ರಾಮದ ಅರಳಿಕಟ್ಟೆ ಮಾರ್ಗವಾಗಿ ಜಾಗೃತಿ ಮೂಡಿಸಿ ಪುನಃ ಕಾಲೇಜಿನ ಆವರಣದಲ್ಲಿ ಮುಕ್ತಾಯಗೊಂಡಿತು. ಬಟಿಂಗ್ಸ್ ಪ್ರದರ್ಶನದಿಂದ ಕಾಲ್ನಡಿಗೆ ಜಾಥಾಕ್ಕೆ ಮೆರಗು ತಂದಿತು. 350 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
 ಕಾರ್ಯಕ್ರಮದಲ್ಲಿ ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಹನಮಂತಪ್ಪ ಎಚ್, ಪಂಚಾಯತ ಅಭಿವೃದ್ದಿ ಅಧಿಕಾರಿ ಸಿದ್ದಮ್ಮ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯತ ಕಾರ್ಯದರ್ಶಿ ಪೂರ್ಣೆಂದ್ರಯ್ಯ ಭೂಸನೂರಮಠ, ಸಂಜೀವಿನಿ ಯೋಜನೆಯ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ಉಪನ್ಯಾಸಕ ಶ್ರೀನಿವಾಸಗೌಡ, ವೆಂಕಟರಡ್ಡಿ, ದ್ಯಾಮಣ್ಣ ಸಂಜೀವಿನಿ ಯೋಜನೆಯ ವಿದ್ಯಾಲಕ್ಷ್ಮೀ, ಕರವಸೂಲಿಗಾರ ಕೊಟ್ರೇಶ್, ಗ್ರಾಮ ಪಂಚಾಯತಿ ಡಿಇಒ ಮೌನೇಶ, ಸಿಬ್ಬಂದಿ ರಾಮಣ್ಣ, ಸಂಜೀವಿನಿ ಯೋಜನೆಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ