LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಅಥಣಿ - ಪುಣೆ  ಮತ್ತು ಕೊಲ್ಲಾಪುರ  ಸಾರಿಗೆ ಬಸ್ ಗಳಿಗೆ ಚಾಲನೆ"  

ಅಥಣಿ: ಅಥಣಿ ಸಾರಿಗೆ ಘಟಕದಿಂದ ನೆರೆಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶಕ್ಕೆ ಅಂದರೆ ಅಂತರ್ ರಾಜ್ಯ ಸಾರಿಗೆ ಬಸ್ ಸೌಕರ್ಯ ಆರಂಭಿಸಲಾಗಿದೆ. ಅಥಣಿ ನಾಗರಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
 ಅವರು ಅಥಣಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಥಣಿ -ಪುಣೆ ಮತ್ತು ಅಥಣಿ - ಕೊಲ್ಲಾಪುರ ನೂತನ ಸಾರಿಗೆ ಬಸ್ ಸoಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಥಣಿ ಸಾರಿಗೆ ಘಟಕದಿಂದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ, ಮಹಾನಗರಗಳಿಗೆ ಈಗಾಗಲೇ ಸಾರಿಗೆ ಸೇವೆ ಕಲ್ಪಿಸಲಾಗಿದ್ದು, ಅಥಣಿ ಗಡಿ ಭಾಗದಲ್ಲಿರುವುದರಿಂದ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣ ಆಂಧ್ರಪ್ರದೇಶಕ್ಕೆ ಜನರು ಅನೇಕ ವಾಣಿಜ್ಯ ವ್ಯವಹಾರಗಳಿಗೆ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುತ್ತಾರೆ. ಆದ್ದರಿಂದ ಮೊದಲ ಹಂತವಾಗಿ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಅಂತರಾಜ್ಯ ಬಸ್ ಸೇವೆ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದ ಶ್ರೀಶೈಲ ಪುಣ್ಯಕ್ಷೇತ್ರಕ್ಕೆ ಸಾರಿಗೆ ಸೇವೆಯನ್ನ ಆರಂಭಿಸಲಾಗುವುದು. ಅಥಣಿ ಘಟಕದಿಂದ ಚಿಕ್ಕೋಡಿ, ಬೆಳಗಾವಿ ಮತ್ತು ವಿಜಯಪುರಕ್ಕೆ ತಡೆರಹಿತ ವಾಹನ ಸೇವೆ ಆರಂಭಿಸಬೇಕು ಎಂಬ ಬೇಡಿಕೆ ಹೆಚ್ಚಾಗಿದ್ದು, ಆದರೆ ಅಲ್ಲಲ್ಲಿ ಗ್ರಾಮಸ್ಥರು ಮನವಿ ನೀಡಿ ನಿಲುಗಡೆಗೆ ಅವಕಾಶ ಕೇಳುತ್ತಿದ್ದಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತಡೆರಹಿತ ಸಾರಿಗೆ ಸೇವೆ ಆರಂಭಿಸಲಾಗುವುದು. ಅಥಣಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗಾಗಿ 
 " ವಿದ್ಯಾರ್ಥಿ ಸ್ನೇಹಿ " ನೂತನ ಸಾರಿಗೆ ಸೇವೆ ಆರಂಭಿಸುವ ಸಂಕಲ್ಪ ಹೊಂದಲಾಗಿದೆ. ಮುಂಬರುವ ದಿನಗಳಲ್ಲಿ ಈ ಸಾರಿಗೆ ಘಟಕಕ್ಕೆ ಇನ್ನಷ್ಟು ಹೊಸ ಬಸ್ ಗಳನ್ನು ಇಲಾಖೆಯಿಂದ ತರುವ ಮೂಲಕ ತಾಲೂಕಿನ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. 
  ಚಿಕ್ಕೋಡಿ ವಿಭಾಗಿಯ ಸಾರಿಗೆ ನಿಯಂತ್ರಣಾಧಿಕಾರಿ ಮಹಾದೇವ ಮುಂಜೆ ಮಾತನಾಡಿ ಅಥಣಿ ಸಾರಿಗೆ ಘಟಕದಿಂದ ಆರಂಭವಾಗಿರುವ ಅಥಣಿ - ಪುಣೆ ಪ್ರತಿದಿನ ಬೆಳಿಗ್ಗೆ ಇಲ್ಲಿಂದ 7: 45 ಕ್ಕೆ ಮತ್ತು ಅಥಣಿ - ಕೊಲ್ಲಾಪುರ 7 : 00 ಗಂಟೆಗೆ ಹೊರಡಲಿದೆ. ಅಥಣಿ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. 
 ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ಯಾಮ ಪೂಜಾರಿ, ವಿನಾಯಕ ಬಾಗಡಿ, ಗಿರೀಶ್ ದಿವಾನಮಳ, ಮುರುಗೇಪ್ಪ ಹಳದಮಳ, ಮಲ್ಲು ಕುಳ್ಳೋಳಿ, ಮುತ್ತುರಾಜ ಮೊಕಾಶಿ, ಶ್ರೀನಿವಾಸ ಪಟ್ಟಣ, ಆನಂದ ಮಾದಗೂಡಿ, ಅಥಣಿ ಸಾರಿಗೆ ಘಟಕದ ವ್ಯವಸ್ಥಾಪಕ ಎನ್. ಎಂ ಕೇರಿ, ಅಮಿನಸಾಬ ಚಿಂಚ್ಚಲಿ, ಮಹೇಂದ್ರ ಸಾಳವೆ,  ಸೇರಿದಂತೆ ಸಾರಿಗೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್