LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಟ್ಟಾರಿ-ವಾಘಾ ಗಡಿ ಸಂಪೂರ್ಣವಾಗಿ ಮುಚ್ಚಲಾಗಿದೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಉಳಿದಿದ್ದ ಪಾಕಿಸ್ತಾನಿಗಳು ದೇಶ ತೊರೆಯಲು ಸೂಚಿಸಲಾಗಿತ್ತು. ಅದರಂತೆ, ಆ ದೇಶದ ನಾಗರಿಕರು ಅಟ್ಟಾರಿ-ವಾಘಾ ಗಡಿಯ ಮೂಲಕ ಸ್ವದೇಶಕ್ಕೆ ವಾಪಸ್​​ ತೆರಳಿದ್ದಾರೆ. ಇದರಿಂದ ಗುರುವಾರ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ.


ಅಟ್ಟಾರಿ-ವಾಘಾ ಗಡಿ ದಾಟುವ ಸ್ಥಳವನ್ನು ಈಗ ಸಂಪೂರ್ಣವಾಗಿ ಮುಚ್ಚಲಾಗಿದೆ. ಎರಡು ದಿನಗಳಿಂದ ಜನರಿಂದ ತುಂಬಿದ್ದ ಗಡಿಯು ಇಂದು (ಗುರುವಾರ) ಖಾಲಿ ಇತ್ತು. ಹೀಗಾಗಿ ಎರಡೂ ದೇಶಗಳ ಸಂಧಿಸುವ ಗಡಿಯನ್ನು ಮುಚ್ಚಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.


ಗಡಿ ದಾಟಿದವರು ಇಷ್ಟು: ಅಟ್ಟಾರಿ-ವಾಘಾ ಗಡಿಯ ಮೂಲಕ 15 ಭಾರತೀಯ ಸೇರಿ 125 ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದಿದ್ದಾರೆ. ಕಳೆದ 7 ದಿನಗಳಲ್ಲಿ ಒಟ್ಟು 911 ಪಾಕಿಗಳು ದೇಶ ಬಿಟ್ಟು ತೊಲಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದೀರ್ಘಾವಧಿ ಭಾರತದ ವೀಸಾ ಹೊಂದಿದ್ದ 73 ಪಾಕ್​ ನಾಗರಿಕರು ಸೇರಿ 152 ಭಾರತೀಯರು ಇದೇ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ. ಅಲ್ಪಾವಧಿ ವೀಸಾ ಹೊಂದಿದವರ ಪೈಕಿ ಒಟ್ಟು 1617, ದೀರ್ಘಾವಧಿ ವೀಸಾದ 224 ಜನರು ಪಾಕಿಸ್ತಾನಕ್ಕೆ ಮರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್