LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಘುವಂಶಜನಿಗೆ 'ಸೂರ್ಯ ರಶ್ಮಿಯ ತಿಲಕ'

ಅಯೋಧ್ಯೆ ಏಪ್ರಿಲ್ 17: ರಾಮನವಮಿ ಹಿನ್ನೆಲೆಯಲ್ಲಿ ಭವ್ಯ ರಾಮಮಂದಿರದಲ್ಲಿ ವಿಸ್ಮಯವೊಂದು ಜರುಗಿತು. ಬುಧವಾರ ಮಧ್ಯಾಹ್ನ ಸರಿಯಾಗಿ 12.02 ನಿಮಿಷಕ್ಕೆ ಸರಿಯಾಗಿ ಸೂರ್ಯನ ಕಿರಣಗಳು ರಘುವಂಶಜ ಬಾಲರಾಮನ ಹಣೆಗೆ ಸ್ಪರ್ಶಿಸಿತು. ಇದನ್ನು ಸೂರ್ಯಾಭಿಷೇಕ ಅಥವಾ ಸೂರ್ಯ ತಿಲಕ ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ರಾಮನವಮಿಯಂದು ಸೂರ್ಯ ರಶ್ಮಿಯ ವಿಸ್ಮಯ ನೆರವೇರಿತು.

500 ವರ್ಷಗಳ ಕಾಯುವಿಕೆ ಬಳಿಕ ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆಯಾಗಿದೆ. ಮೊದಲ ರಾಮನವಮಿ  ಭವ್ಯ ಮಂದಿರದಲ್ಲಿ ವಿಜೃಂಭಣೆಯಿಂದ ಜರುಗುತ್ತಿದೆ. ಏಪ್ರಿಲ್ 16, 17, 18 ಮೂರು ದಿನ ಸತತ 20 ಗಂಟೆಗಳ ಮಂದಿರವು ಭಕ್ತರಿಗಾಗಿ ತೆರೆದಿರುತ್ತದೆ. ದೇಶ - ವಿದೇಶಗಳಿಂದ ಲಕ್ಷಾಂತರ ಭಕ್ತರು ಬಾಲರಾಮನ ದರ್ಶನಕ್ಕಾಗಿ ಹರಿದುಬರುತ್ತಿದ್ದಾರೆ. ಸುಮಾರು 40 ಲಕ್ಷ ಭಕ್ತರು ಅಯೋಧ್ಯೆಗೆ ಆಗಮಿಸುವ ಅಂದಾಜಿದ್ದು, ಟ್ರಸ್ಟ್ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.


ಸರ್ವಾಲಂಕೃತ ಸುಂದರಮೂರ್ತಿ ರಾಮನಿಗೆ ಸೂರ್ಯನು ತನ್ನ ಕಿರಣಗಳಿಂದ ತಿಲಕ ಇಟ್ಟನು. ಮಧ್ಯಾಹ್ನ ಈ ಅಮೋಘ ವಿಸ್ಮಯ ಸಂಭವಿಸಿತು. ಈ ಅದ್ಭುತ ಗಳಿಗೆಯು ಮಾಧ್ಯಮಗಳಲ್ಲಿ ನೇರಪ್ರಸಾರ ಮಾಡಲಾಯಿತು. ಯೂಟ್ಯೂಬ್​​ಗಳಲ್ಲಿ ಇದರ ಪ್ರಸಾರ ಮಾಡಲಾಗುತ್ತಿದೆ.


ಇಂದು ಸಂಭವಿಸಿದ ಸೂರ್ಯ ತಿಲಕ ವಿಸ್ಮಯವನ್ನು ಕಳೆದ ವಾರ ಪ್ರಯೋಗ ಮಾಡಿ ನೋಡಲಾಗಿತ್ತು. ರೂರ್ಕಿಯ CBRI ವಿಜ್ಞಾನಿಗಳು ಈ ಪ್ರಯೋಗ ನಡೆಸಿದ್ದು, ಸೂರ್ಯನ ಕಿರಣಗಳು ರಾಮನ ಹಣೆಯ ಮೇಲೆ ಬಿದ್ದ ತಕ್ಷಣ ರತ್ನದಂತೆ ಹೊಳೆಯಿತು. ಇದರ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.


ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಆಸ್ಟ್ರೋಫಿಸಿಕ್ಸ್‌ ಸಹಭಾಗಿತ್ವದಲ್ಲಿ ಒಪ್ಟಿಕಾ ಎಂಬ ಕಂಪನಿ ಈ ಯೋಜನೆಯನ್ನು ರೂಪಿಸಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ಯಂತ್ರವೊಂದನ್ನು ಅಭಿವೃದ್ಧಿಪಡಿಸಲಾಗಿದೆ. ಒಂದಿಷ್ಟು ನಿಮಿಷ ರಾಮನ ಹಣೆಯ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳಲಿದೆ. ಇಲ್ಲಿ ಅಳವಡಿಸಲಾದ ಆಪ್ಟೋಮೆಕಾನಿಕಲ್ ಸಿಸ್ಟಮ್ ಅತಿಗೆಂಪು ಫಿಲ್ಟರ್‌ನಿಂದ ಮಾಡಲ್ಪಟ್ಟಿದೆ. ಇದಕ್ಕೆ ನಿಖರ ಮಸೂರ ಮತ್ತು ಕನ್ನಡಿಗಳನ್ನು ಬಳಸಿ ವಿಶಿಷ್ಟ ವಿನ್ಯಾಸವನ್ನು ಒದಗಿಸಲಾಗಿದೆ. ಈ ಅಂಶಗಳು ನೈಸರ್ಗಿಕ ಸೂರ್ಯನ ಬೆಳಕನ್ನು ಬಳಸಿಕೊಂಡು ದೈವಿಕ ಸಂಕೇತವಾಗಿ ತಿಲಕವನ್ನು ಉಂಟು ಮಾಡಲಿದೆ.


ರಾಮ ಭಕ್ತರಿಗಾಗಿ ಪ್ರಸಾರ ಭಾರತಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದು, ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸಂಪೂರ್ಣ ಕಾರ್ಯಕ್ರಮ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಅಲ್ಲದೆ, ಅಯೋಧ್ಯೆ ಸೇರಿದಂತೆ ಹಲವು ನಗರಗಳಲ್ಲಿ ದೊಡ್ಡ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಡಿಡಿ ನ್ಯೂಸ್ ಮತ್ತು ಡಿಡಿ ನ್ಯಾಷನಲ್ ಯೂಟ್ಯೂಬ್ ಚಾನಲ್‌ನಲ್ಲಿಯೂ ಲೈವ್ ಕವರೇಜ್ ಲಭ್ಯವಿದೆ.


ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಹೇಳುವಂತೆ, ಭಗವಂತ ರಾಮನು ಭೂಮಿಯ ಮೇಲೆ ಅವತರಿಸಿದಾಗ, ಸೂರ್ಯದೇವನು ಅಯೋಧ್ಯೆಯನ್ನು ಒಂದು ತಿಂಗಳು ಬಿಟ್ಟು ಹೋಗಲಿಲ್ಲ ಎಂಬ ಐತಿಹ್ಯವಿದೆ. ರಾಮನವಮಿಯನ್ನು ನಾವು ರಾಮನ ಜನ್ಮದಿನ ಆಚರಿಸುತ್ತೇವೆ. ಇಂದಿನ ಸುದಿನವೇ ಸೂರ್ಯನ ಕಿರಣಗಳು ಭವ್ಯ ಮಂದಿರದಲ್ಲಿ ವಿರಾಜಮಾನವಾಗಿರು ರಾಮನ ಹಣೆಗೆ ತಿಲಕಧಾರಿಯಾಗಲಿದೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್