LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ೧೩ ಅಭ್ಯರ್ಥಿಗಳಿಂದ ೧೯ ನಾಮಪತ್ರ ಸಲ್ಲಿಕೆ


ಬಾಗಲಕೋಟೆ : ಮಾರ್ಚ ೨೩ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರದಂದು ಒಟ್ಟು ೧೩ ಅಭ್ಯರ್ಥಿಗಳಿಂದ ೧೯ ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಿಂದ ವೀರಭದ್ರಯ್ಯ ಚರಂತಿಮಠ ೩ ನಾಮಪತ್ರ ಸಲ್ಲಿಸಿದೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಉಮೇಶ ಮೇಟಿ ೪ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರದಿಂದ ಶಿವಪ್ಪ ಪಡಸಲಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರರಿಂದ ಯಂಕಪ್ಪ ಕಮತಗಿ, ಅಬ್ದುಲ್ ರಜಾಕ್ ಬಾಳೀಕಾಯಿ, ಆಯುಬಖಾನ ಲಾಲಸಾಬ ಬಾಗೇವಾಡಿ, ಪರಶುರಾಮ ನೀಲನಾಯಕ, ಬಾಬುಷಾ ರೊಳ್ಳಿ, ಪ್ರಶಾಂತ ರಾವ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಗೋವಿಂದರಾಜ ಬಳ್ಳಾರಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಾಗರಾಜ ಕಲಕುಟಗರ, ಜನತಾ ಚಳುವಳಿ ಭಾರತ ಪಕ್ಷದಿಂದ ತೇಜೋರಾಮ ಶೆಟ್ಟಿ, ಆಲ್ ಇಂಡಿಯಾ ಜನರಕ್ಷಾ ಪಾರ್ಟಿಯಿಂದ ಸಿದ್ದಪ್ಪಗೋಡಿ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಾರ್ಚ ೨೦ ರಂದು ೫ ಅಭ್ಯರ್ಥಿಗಳಿಂದ ೭ ನಾಮಪತ್ರ ಸಲ್ಲಿಕೆಯಾಗಿದ್ದವು. ಇಲ್ಲಿವರೆಗೆ ಒಟ್ಟು ೧೮ ಅಭ್ಯರ್ಥಿಗಳಿಂದ ಒಟ್ಟು ೨೬ ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್