LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ರೇವಣ್ಣ  ಪೆನ್​ಡ್ರೈವ್​ ಹಂಚಿಕೆ ಪ್ರಕರಣದ ಆರೋಪಿಗಳ ಜಾಮೀನು ವಜಾ

ಹಾಸನ, ಮೇ 14: ಹಾಸನ ಸಂಸದ ಪ್ರಜ್ವಲ್​ ರೇವಣ್ಣ  ಪೆನ್​ಡ್ರೈವ್​ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್​ ಗೌಡ, ಚೇತನ್ ಜಾಮೀನುಅರ್ಜಿ ವಜಾಗೊಂಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಲಿಖಿತ್​, ಚೇತನ್​​​​ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (ಇಂದು (ಮೇ 14) ಹಾಸನದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ ಪ್ರಕರಣ ಸಂಬಂಧ ಮಾಜಿ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಆಪ್ತರು ಎನ್ನಲಾದ ಲಿಖಿತ್​ ಗೌಡ, ಚೇತನ್ ಅವರನ್ನು ಎಸ್​ಐಟಿ ಅಧಿಕಾರಿಗಳು ಮೇ 12ರಂದು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೀಗ ಆರೋಪಿಗಳ ಜಾಮೀನು ಅರ್ಜಿ ಸಹ ವಜಾಗೊಂಡಿದೆ.

ಮತ್ತೊಂದೆಡೆ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ​ ನಿನ್ನೆ(ಮೇ 13) ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಆದ್ರೆ, ನಿನ್ನೆ ಸಮಯ ಆಗಿದ್ದರಿಂದ ಇಂದು (ಮೇ 14) ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇದರಿಂದ ಜೆಡಿಎಸ್​ ಮುಖಂಡರು, ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ ರೇವಣ್ಣ ಅವರು ಜೈಲಿನಿಂದ ನೇರವಾಗಿ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರ  ನಿವಾಸಕ್ಕೆ ತೆರಳಿದ್ದಾರೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ