ಬೆಂಗಳೂರು, ಜುಲೈ 09: ಕನ್ನಡ ಸೇರಿದಂತೆ ಎಸ್ಎಸ್ಎಲ್ಸಿಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಾಕಷ್ಟು ವಿರೋಧ ಕೇಳಿಬರುತ್ತಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ಅಂಕಗಳನ್ನ 100ಕ್ಕೆ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.
ಕನ್ನಡ ಸೇರಿದಂತೆ ಎಸ್ಎಸ್ಎಲ್ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕಗಳನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ ಎಂಬ ಸುದ್ದಿಯನ್ನು ಪತ್ರಿಕೆಗಳಲ್ಲಿ ಓದಿ ಅಚ್ಚರಿ ಆಯಿತು. ಈ ನಿರ್ಧಾರವು ತೀವ್ರ ಖಂಡನೀಯ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.