Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕ್‌ಗಳ ಸಾಲ ಸೌಲಭ್ಯ ಬಳಸಿಕೊಂಡು ಆರ್ಥಿಕ ಸದೃಢರಾಗಿ

ವಿಶ್ವ ತಾಯಂದಿರ ದಿನಾಚರಣೆಯಲ್ಲಿ ಶಾಖಾ ವ್ಯವಸ್ಥಾಪಕಿ ಅಂಬಿಕಾ ಗಾಡಗೋಳಿ ಸಲಹೆ

ಬೆಳಗಾವಿ, ಮೇ.12 : ಕುಟುಂಬದ ಆರ್ಥಿಕ ಚೈತನ್ಯ ಹಾಗೂ ಶ್ರೇಯೋಭಿವೃದ್ಧಿಗೆ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಮಹಿಳೆಯರು ನಾಲ್ಕುಗೊಡೆಯಲ್ಲಿರದೇ ಬ್ಯಾಂಕ್‌ಗಳಲ್ಲಿನ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ಸದೃಢರಾಗಬೇಕು ಎಂದು ಮೂತ್ತೂಟ ಫಿನ್‌ಕಾರ್ಪ್‌ನ ವಡಗಾವಿ ಶಾಖಾ ವ್ಯವಸ್ಥಾಪಕಿ ಅಂಬಿಕಾ ಗಾಡಗೋಳಿ ಹೇಳಿದರು.

ನಗರದ ಮೂತ್ತೂಟ ಫಿನ್‌ಕಾರ್ಪ್‌ನ ವಡಗಾವಿಯ ಶಾಖೆಯಲ್ಲಿ ನಡೆದ ವಿಶ್ವ ತಾಯಂದಿರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಶಾಂತಿ, ನೆಮ್ಮದಿ ಸಮೃದ್ಧಿಯಾಗಿ ನೆಲೆಯೂರಬೇಕಾದರೇ ಆ ಮನೆಯ ಹೆಣ್ಮಕ್ಕಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳು ಬಂದಾಗಲೇ ಮನೆಯಲ್ಲಿ ಶಾಂತಿ, ನೆಮ್ಮೆದಿ ಹಾಳಾಗುವುದು. ಹೀಗಾಗಿ ಮಹಿಳೆಯರು ಬ್ಯಾಂಕ್‌ನಲ್ಲಿರುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಹಾಗೆಯೇ ತಮ್ಮ ಕಾಲು ಮೇಲೆ ತಾವು ನಿಲ್ಲುವುದಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧ್ಯಕ್ಷೆ ಮಂಜುಳಾ ಬೆನ್ನಿವಾಡೆ ಮಾತನಾಡಿ, ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರೊಂದಿಗೆ ವಿಶ್ವ ತಾಯಂದಿರ ದಿನ ಆಚರಿಸಿರುವುದು ಅರ್ಥಗರ್ಭಿತವಾಗಿದೆ ಎಂದು ಶ್ಲಾಘಿಸಿದರು.

Advertisement

ಸುಮಾರು 150ಕ್ಕೂ ಅಧಿಕ ತಾಯಂದಿರು ಆಚರಣೆಯಲ್ಲಿ ಭಾಗವಹಿಸಿದ್ದರು. ಆಶಾ ಕಾರ್ಯಕರ್ತರಲ್ಲಿ ಮತ್ತು ಎಸ್‌ಡಬ್ಲೂಜೆ ಸದಸ್ಯರಲ್ಲಿ ಜಾಗೃತಿ ಮೂಡಿಸಲಾಯಿತು. ಹಿರಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಮರ್ಪಿತ ಸೇವೆ, ಬದ್ಧತೆ ಮತ್ತು ಕಠಿಣ ಪರಿಶ್ರಮ ಸೇರಿದಂತೆ ಸಮಾಜಕ್ಕೆ ನೀಡಿದ ಕೊಡುಗೆ ಗುರುತಿಸಿ ಅವರನ್ನು ಸನ್ಮಾನಿಸಲಾಯಿತು.

ಆರ್‌ಪಿ ಉತ್ಪನ್ನಗಳ ಕುರಿತು ವಿವರಿಸುವ ಮೂಲಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಮತ್ತು ತಳಮಟ್ಟದಲ್ಲಿ ಮಹಿಳಾ ಕಲ್ಯಾಣ ಗುಂಪುಗಳೊಂದಿಗೆ ಉತ್ತಮ ಸಂಬಂಧಗಳನ್ನು ಬೆಳೆಸಲಾಯಿತು.

ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ.ಎಚ್‌, ಪ್ರದೇಶ ವ್ಯವಸ್ಥಾಪಕ ಕಿರಣ್.ಬಿ, ಚಾನಲ್‌ ಮುಖ್ಯಸ್ಥ ನವೀನ್ ಮತ್ತು ಐಆರ್‌ಎಂ ಶಿವು, ಮಾರ್ಕೆಟಿಂಗ್‌ ಹೆಡ್‌ ಹೀರಾಲಾಲ್‌ ಜೆ.ಡಿ, ಶಾಖಾ ಸಿಬ್ಬಂದಿಯರಾದ ಆಕಾಶ.ಎಂ, ಕಾವೇರಿ.ಬಿ, ಜ್ಯೋತಿ.ಎಸ್‌, ಮಾರುತಿ.ಪಿ, ಶಿಬಂ.ಪಿ, ಶಿಪಾಲಿ.ಕೆ ಸೇರಿದಂತೆ ಆರ್‌ಎಂ, ಎಎಂ, ಐಆರ್‌ಎಂಎಸ್ ಮತ್ತು ಚಾನಲ್ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು.

 

ಮನೆಯಲ್ಲಿ ಶಾಂತಿ, ನೆಮ್ಮದಿ ಸಮೃದ್ಧಿಯಾಗಿ ನೆಲೆಯೂರಬೇಕಾದರೇ ಆ ಮನೆಯ ಹೆಣ್ಮಕ್ಕಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳು ಬಂದಾಗಲೇ ಮನೆಯಲ್ಲಿ ಶಾಂತಿ, ನೆಮ್ಮೆದಿ ಹಾಳಾಗುವುದು. ಹೀಗಾಗಿ ಮಹಿಳೆಯರು ಬ್ಯಾಂಕ್‌ನಲ್ಲಿರುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಹಾಗೆಯೇ ತಮ್ಮ ಕಾಲು ಮೇಲೆ ತಾವು ನಿಲ್ಲುವುದಕ್ಕೆ ಪ್ರಯತ್ನಿಸಬೇಕು.

-ಅಂಬಿಕಾ ಗಾಡಗೋಳಿ, ವ್ಯವಸ್ಥಾಪಕಿ, ಮೂತ್ತೂಟ ಫಿನ್‌ಕಾರ್ಪ್‌ ವಡಗಾವಿ ಶಾಖೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*