LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ: 2,03,410 ಎಸ್‌ಐಆರ್ ಗಣತಿ ನಮೂನೆ ವಿತರಣೆ


ಬಳ್ಳಾರಿ,ಜು.10
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ನಡೆಯುತ್ತಿದ್ದು, ಮತದಾರರಿಗೆ ಗಣತಿ ಅರ್ಜಿಗಳನ್ನು ವಿತರಿಸಲು ಬಿ.ಎಲ್.ಓ ಗಳ ಮೂಲಕ ಮನೆ ಮನೆ ಭೇಟಿ ನೀಡುತ್ತಿದ್ದಾರೆ. ಒಟ್ಟು 2,79,144 ಮತದಾರರಿದ್ದು, ಬುಧವಾರಕ್ಕೆ 2,03,410 (ಶೇ. 72.87) ಎಸ್‌ಐಆರ್ ಗಣತಿ ನಮೂನೆಗಳನ್ನು ವಿತರಿಸಲಾಗಿದೆ.
ಈ ಮನೆ ಮನೆ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಜುಲೈ 29 ರವರೆಗೆ ನಡೆಯಲಿದೆ. ಈಗಾಗಲೇ ಶೇ.98.01 ರಷ್ಟು ಮತದಾರರನ್ನು ಮ್ಯಾಪ್ ಮಾಡಲಾಗಿದೆ. 15,033 (ಶೇ. 5.39) ಅರ್ಜಿಗಳು ಡಿಜಿಟಲೀಕರಣಗೊಂಡಿವೆ. 664 ಅರ್ಜಿಗಳು ಆನ್‌ಲೈನ್ ಮೂಲಕ ಸಲ್ಲಿಕೆಯಾಗಿವೆ.
431- ಮರಣ ಹೊಂದಿದವರು, 203 -ಶಾಶ್ವತವಾಗಿ ವಲಸೆ ಹೋದವರು, 28- ಈಗಾಗಲೇ ದಾಖಲಾಗಿರುವ ಮತದಾರರು, 02- ಗೈರುಹಾಜರಿ ಹಾಗೂ 10-ಇತರ ಪ್ರಕರಣಗಳು (10) ಸೇರಿವೆ ಎಂದು ಬಳ್ಳಾರಿ ನಗರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯೂ ಆದ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್