LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇಂದಿರಾ ಗಾಂಧಿ ಸರ್ಕಾರದ ತುರ್ತು ಪರಿಸ್ಥಿತಿ ವಿರೋಧಿಸಿ ಭಾರತೀಯ ಜನತಾ ಪಕ್ಷ ಪ್ರತಿಭಟನೆ

ಬೆಳಗಾವಿ: ಅಂದಿನ ಪ್ರಧಾನಿ ಇಂದಿರಾ ಗಾಂಧಿ ತಮ್ಮ ಸರ್ಕಾರದ ಅಸ್ತಿತ್ವವನ್ನು ಉಳಿಸಿಕೊಳ್ಳಲು ದೇಶದಲ್ಲಿ 1975 ಜೂನ್ 25 ರಂದು ತುರ್ತು ಪರಿಸ್ಥಿತಿಯನ್ನು ಹೇರಿದ್ದರು ಈ ಘಟನೆಗೆ 50 ವರ್ಷವೇ ಗತಿಸಿದ್ದು ಬಜಿಪಿಯು ತುರ್ತು ಪರಿಸ್ಥಿತಿ ವಿರೋಧಿಸಿ ಸಂವಿಧಾನ ಉಳಿವಿಗಾಗಿ ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡಿ ಸಂವಿಧಾನವನ್ನು ಗಾಳಿಗೆ ತೂರಿ ತಮ್ಮ ಸ್ವಾರ್ಥಕ್ಕಾಗಿ ಕೋರ್ಟ್ ನಿರ್ಣಯವನ್ನು ಧಿಕ್ಕರಿಸಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ 1,40,000 ಜನರನ್ನು ಜೈಲಿಗೆ ಹಾಕಿದ್ದರು . ಸಾವಿರಾರು ಜನರನ್ನು ಜೈಲಿನಲ್ಲಿ ಸಾಯುವ ಹಾಗೆ ಮಾಡಿದರು.

ಹಿಟ್ಲರ್ ಶಾಹಿ ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ ಎಂದು ಕಟುವಾಗಿ ಟೀಕಿಸಿದರು.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆ ಕೇಳಬೇಕು ನಂತರ ಸಂವಿಧಾನದ ಬಗ್ಗೆ ಮಾತನಾಡಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ಸಂಜೆಯ ಪಾಟೀಲ್ ಅವರು ಮಾತನಾಡಿ ಸಂವಿಧಾನ ರಕ್ಷಣೆಗಾಗಿ ನಮ್ಮ ಪಕ್ಷ ಬದ್ಧವಾಗಿದೆ. ದೇಶದ ಜನತೆಗೆ ಕಾಂಗ್ರೆಸ್ ಪಕ್ಷ ಸುಳ್ಳು ಹೇಳುತ್ತಿದೆ. ಸುಳ್ಳಿನ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿಗಳ ಕುರಿತು ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿಯವರು ಚುನಾವಣೆಯಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎಂದು ಸುಳ್ಳು ಹೇಳಿದರು ಎಂದು ಕಟುವಾಗಿ ಟೀಕಿಸಿದರು.

ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬೇನಕೆ ಅವರ ಉಪಸ್ಥಿತಿಯಲ್ಲಿ ಬೆಳಗಾವಿ ಮಹಾನಗರ ಮತ್ತು ಗ್ರಾಮೀಣ ಬಿಜೆಪಿ ಅಧ್ಯಕ್ಷರಾದ ಸುಭಾಷ್ ಪಾಟೀಲ್, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ, ಖಾನಾಪುರ್ ಶಾಸಕ ವಿಠಲ್ ಹಾಲಿಗೆಕರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಮಹಾಂತೇಶ್ ದೊಡ್ಡಗೌಡರ್, ಮಾಜಿ ಶಾಸಕರುಗಳು ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬೆಳಗಾವಿ ಸರ್ಕಿಟ್ ಹೌಸ್ ನಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಹೋಗಲು ನಿರ್ಧರಿಸಿದ್ದರು ಆದರೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಪೊಲೀಸರು ಬಿಜೆಪಿ ನಾಯಕರುಗಳನ್ನು ಬಂಧಿಸಿ ಪೋಲಿಸ್ ವಾಹನದಲ್ಲಿ ಕರೆದುಕೊಂಡು ಸರ್ಕಿಟ್ ಹೌಸನಲ್ಲಿ ಬಿಡುಗೊಳಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ