LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಪ್ಟೆಂಬರ್ 28ರಿಂದ ಕನ್ನಡದ ಬಿಗ್‌ಬಾಸ್‌ ಶೋ ಪ್ರಾರಂಭ; ಯಾರೆಲ್ಲ ದೊಡ್ಮನೆಗೆ ಎಂಟ್ರಿ?

ಬೆಂಗಳೂರು:   ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಂದು ಶೋ ಪ್ರಾರಂಭ ಆಗುತ್ತಿದೆ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಪ್ರೋಮೋ ಸೆಪ್ಟೆಂಬರ್ 2ರಂದು ರಿಲೀಸ ಆಯಿತು. ಈ ಪ್ರೋಮೋ ಶೂಟ್​ನ ಝಲಕ್​ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ 12 ಪ್ರೋಮೋ ಹೊರಬಿದ್ದ ಬೆನ್ನಲ್ಲೇ ಈ ಬಾರಿ ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ಎಂಬ ಗುಸುಗುಸು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದು ಯಾರೆಲ್ಲ ಅಂದ್ರೆ, ಈ ಸಾಲಿನಲ್ಲಿ ಕೇಳಿಬರುತ್ತಿರುವ ಮೊದಲ ಹೆಸರು ಸಾಗರ್ ಬಿಳಿಗೌಡ. ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್ ಅವರ ಸತ್ಯ ಸೀರಿಯಲ್​ನಲ್ಲಿ ಸಾಗರ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಇನ್ನು ಎರಡನೇ ಹೆಸರು ಶ್ವೇತಾ ಪ್ರಸಾದ್. ಆರಂಭದಲ್ಲಿ ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್​ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.


ಝೀ ಕನ್ನಡದಲ್ಲಿ ಪ್ರಸಾರ ಕಂಡ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನ ಸ್ಪರ್ಧಿ ಅನನ್ಯಾ ಅಮರ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ. ಇನ್ನು ಪತ್ರಿಕೋದ್ಯಮ ಕೋಟಾದಿಂದ ಈ ಬಾರಿ ಜಯಪ್ರಕಾಶ್ ಶೆಟ್ಟಿ ಬಿಗ್ ಬಾಸ್​ಗೆ ಬರಲಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ.


ಇವರ ಜೊತೆಗೆ ಕೆಜಿಎಫ್‌ ಸಿನಿಮಾದ ಮೂಲಕ ದೇಶಾದ್ಯಂತ ಸದ್ದು ಮಾಡಿದವರು ಅರ್ಚನಾ ಜೋಯಿಸ್‌ ಬಿಗ್ ಬಾಸ್​ಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಡಾ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ಸೀತಾ ರಾಮ ಸೀರಿಯಲ್‌ನಲ್ಲಿ ನಟಿಸಿದ್ದ ಗಗನ್ ದೊಡ್ಮನೆಯೊಳಗೆ ಕಾಲಿಡಬಹುದು ಎಂಬ ಗುಸು-ಗುಸು ಇದೆ. ಜೊತೆಗೆ ಇದೇ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿದ ದಿವಂಗತ ನಟ ಲೋಕೇಶ್ - ಗಿರಿಜಾ ಲೋಕೇಶ್ ದಂಪತಿಯ ಪುತ್ರಿ ಪೂಜಾ ಲೋಕೇಶ್ ಕೂಡ ಮನೆಯೊಳಗೆ ಕಾಲಿಡಬಹುದು. ನೂರು ಜನ್ಮಕೂ, ಗೀತಾ ಸೀರಿಯಲ್‌ನಲ್ಲೂ ನಟಿಸಿದ್ದ ಧನುಷ್ ಗೌಡ ಈ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಬಹುದು ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್