LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನನ್ನ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್  

     ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು ಪ್ರೇಕ್ಷಕರ ಮನ ಗೆದ್ದಿದೆ.

     ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ.


     "ದಂಡುಪಾಳ್ಯ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ  ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು. 'ಕೃಷ್ಣಂ ಪ್ರಣಯ ಸಖಿ' ಉತ್ತಮ ಕಥಾಹಂದರ ಹೊಂದಿರುವ ಚಿತ್ರ.  ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು.  ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ . 'ಕೃಷ್ಣಂ ಪ್ರಣಯ ಸಖಿ' ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್ ನ ಚಿತ್ರ.  ನೋಡಿ ಪ್ರೋತ್ಸಾಹಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಮನವಿ ಮಾಡಿದರು.


     "ಇದು ಗಣೇಶ್ ಅವರಿಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ.  ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ 'ಚಿನ್ನಮ್ಮ' ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ" ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.


      ಚಿತ್ರ ಉತ್ತಮವಾಗಿ ಮೂಡಿಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದ ನಾಯಕಿಯರಾದ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಕುರಿತು ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್