LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿವಿಧ ಬೇಡಿಕೆಗಳ ಈಡೇರಿಕೆಗೆ ಬಿಸಿಯೂಟ ಕಾರ್ಮಿಕರ ಮನವಿ





ಬಳ್ಳಾರಿ,ಜ.29..ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಬಿಸಿಯೂಟ ಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಿ ಅವರಿಗೆ ಎಐಯುಟಿಯುಸಿಗೆ ಸಂಯೋಜನೆಗೊAಡ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘ ಬಳ್ಳಾರಿ ತಾಲ್ಲೂಕು ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಿ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಮಹ್ಮದ್ ಜುಬೇರ್ ಅವರು ಮನವಿಪತ್ರಸ್ವೀಕರಿಸಿದರು.

 ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ದೇಶದ ಕೋಟ್ಯಂತರ ಶಾಲಾ ಮಕ್ಕಳ ಹಸಿವು ನೀಗಿಸಿ, ಅಪೌಷ್ಟಿಕತೆ ನಿರ್ಮೂಲನೆ ಮಾಡುವಲ್ಲಿ ಬಿಸಿಯೂಟ ಯೋಜನೆಯ ಪಾತ್ರ ಅತ್ಯಂತ ದೊಡ್ಡದು. ಈ ಯೋಜನೆಯ ಬೆನ್ನೆಲುಬಾಗಿರುವ ಲಕ್ಷಾಂತರ ಬಿಸಿಯೂಟ ಕಾರ್ಮಿಕರು ಅತ್ಯಂತ ಕನಿಷ್ಠ ಗೌರವಧನದಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೆಲೆ ಏರಿಕೆಯ ಈ ಕಾಲದಲ್ಲಿ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ ಎಂದು ತಿಳಿಸಿದೆ.

ಬಿಸಿಯೂಟ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ. ಅಲ್ಲಿಯವರೆಗೆ ಅವರನ್ನು ಕಾರ್ಮಿಕರು ಎಂದು ಪರಿಗಣಿಸಿ ಕನಿಷ್ಟ ವೇತನ ಮತ್ತು ಇತರ ಶಾಸನಬದ್ಧ ಸೌಲಭ್ಯಗಳನ್ನು ನೀಡಬೇಕು. ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು ನೀಡುವ ಅನುದಾನದ ಪಾಲನ್ನು ಹೆಚ್ಚಿಸಿ, ಕಾರ್ಮಿಕರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸಬೇಕು. ಪ್ರಸ್ತುತ ನೀಡುತ್ತಿರುವ ಅತ್ಯಲ್ಪ ಗೌರವಧನವನ್ನು ಹೆಚ್ಚಿಸಬೇಕು ಹಾಗೂ ಬೆಲೆ ಏರಿಕೆಗೆ ಅನುಗುಣವಾಗಿ ಕಾಲಕಾಲಕ್ಕೆ ಗೌರವಧನವನ್ನು ಪರಿಷ್ಕರಿಸಬೇಕು. ಬಿಸಿಯೂಟ ಕಾರ್ಮಿಕರಿಗೆ ನಿವೃತ್ತಿ ವೇತನ ಇ.ಎಸ್.ಐ  ಮತ್ತು ಭವಿಷ್ಯ ನಿಧಿ ಸೌಲಭ್ಯಗಳನ್ನು ಕಲ್ಪಿಸಬೇಕು. ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದುವ ಕಾರ್ಮಿಕರಿಗೆ ಕನಿಷ್ಠ ₹೫ ಲಕ್ಷಗಳ ಇಡಿಗಂಟು ಮೊತ್ತವನ್ನು ನೀಡಬೇಕು. ಈ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಅಥವಾ ಎನ್.ಜಿ.ಓ ಗಳಿಗೆ ವಹಿಸಬಾರದು; ಸರ್ಕಾರವೇ ನೇರವಾಗಿ ನಡೆಸಬೇಕು. ದೇಶದ ಭವಿಷ್ಯವಾದ ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ತೊಡಗಿರುವ ಈ ಕಾರ್ಮಿಕರ ಹಿತದೃಷ್ಟಿಯಿಂದ, ಮುಂಬರುವ ಕೇಂದ್ರ ಬಜೆಟ್‌ನಲ್ಲಿ  ಬೇಡಿಕೆಗಳನ್ನು ಈಡೇರಿಸಬೇಕೆಂದು  ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್,  ಸಲಹೆಗಾರರಾದ ನಾಗರತ್ನ, ಮುಖಂಡರಾದ ಸುರೇಶ್, ಮಂಜುಳಾ, ಸಂಧ್ಯಾ, ಅಮ್ಮ ಮೇರಿ, ಅಂಬಿಕಾ, ನೀಲಮ್ಮ, ಬಸಮ್ಮ , ಸೌಮ್ಯ, ಲತಾ ಉಪಸ್ಥಿತರಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್