LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪರಿಷತ್ ಚುನಾವಣೆ: ಮತದಾರರ ಪಟ್ಟಿಯಲ್ಲಿ ನಕಲಿ ಹೆಸರು; ಬಿಜೆಪಿ ದೂರು

ಕೋಲಾರ, ಜೂ.2: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ನಕಲಿ ದಾಖಲೆಗಳನ್ನು ಕೊಟ್ಟು ಸೇರ್ಪಡೆಯಾಗಿರುವ ಮತದಾರರು ಮತ್ತು ಈ ರೀತಿ ನಕಲಿ ಮತದಾರರನ್ನು ಸೇರ್ಪಡೆ ಮಾಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಈ ನಕಲಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತೆ ಚುನಾವಣಾ ಆಯೋಗಕ್ಕೆ ದೂರ ನೀಡಿದ ಬಿಜೆಪಿ ನಿಯೋಗ ದೂರು ನೀಡಿದೆ.

ಇದೇ ಜೂನ್​ 3 ರಂದು ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಹಾಗೂ ಇತರೆ ಅಧಿಕಾರಿಗಳು ಬೇರೆ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಅರ್ಜಿಗಳನ್ನು ಪರಿಶೀಲಿಸುವಾಗ ನಿರ್ಲಕ್ಷ್ಯತನದಿಂದ ಪದವೀಧರರಲ್ಲದ ಮತ್ತು ಅನರ್ಹರನ್ನು ಕಾನೂನುಬಾಹಿರವಾಗಿ ಮತದಾರರ ಪಟ್ಟಿಗೆ ಸೇರಿಸಿದ್ದಾರೆ ಎಂದು ಆರೋಪಿಸಿದೆ.

ಜೊತೆಗ ಈ ಕುರಿತು ಬಿಜೆಪಿ ನಿಯೋಗ, ‘ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿರುವವರನ್ನು ವಿಚಾರಿಸಿದಾಗ ಕಾಂಗ್ರೆಸ್ ಪಕ್ಷವು ತಮ್ಮ ಅಧಿಕಾರಿಗಳನ್ನು ಬಳಸಿಕೊಂಡು ಸುಳ್ಳು ಅರ್ಜಿ ಸಲ್ಲಿಸಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿರುವುದು ಧೃಡಪಟ್ಟಿದೆ. ಇವರ್ಯಾರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯವಿರುವ ಶಾಲಾ ಶಿಕ್ಷಣವನ್ನೂ ಪೂರ್ಣಗೊಳಿಸಿಲ್ಲವಾದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಿ ಸೇರ್ಪಡೆಗೊಳಿಸಿದ್ದಾರೆ.

ಆದ್ದರಿಂದ ಈ ಕೂಡಲೇ ನಕಲಿ ಮತದಾರರು ಮತ್ತು ಇದಕ್ಕೆ ಕಾರಣೀಬೂತರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳುವಂತೆ ಹಾಗೂ ಇದೇ ರೀತಿಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ನಕಲಿ ಮತದಾರರನ್ನು ಆಕ್ರಮವಾಗಿ ಮತದಾರರ ಪಟ್ಟಿಗೆ ಇತರೆ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ನಾರಾಯಣಸ್ವಾಮಿ ಚಲವಾದಿ ಹಾಗೂ ಮುಖರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ