LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಧಾನಸೌಧಕ್ಕೆ ಬಿಜೆಪಿ ನಾಯಕರ ಪಾದಯಾತ್ರೆ : ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹ


ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಾಸಕರ ಭವನದಲ್ಲಿ ಬಿಜೆಪಿ ನಾಯಕರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ವಿಧಾನಸೌಧದವರೆಗೆ ಪಾದಯಾತ್ರೆ ಕೈಗೊಂಡರು.


ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣ ಖಂಡಿಸಿ ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ನಾಯಕರಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು. ಶಾಸಕರ ಭವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಮಾಲಾರ್ಪಣೆ ಮಾಡಿದರು. ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾದರು.





ಮೊದಲು ಸರ್ಕಾರದ ವಿರುದ್ಧ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಬಳಿಕ ಶಾಸಕರ ಭವನದಿಂದ ವಿಧಾನಸೌಧದ ವರೆಗೂ ಪಾದಯಾತ್ರೆ ನಡೆಸಿದರು. ಅಧಿವೇಶನದಲ್ಲಿ ಮೊದಲ ದಿನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಾಲ್ಮೀಕಿ ನಿಗಮದ ಅಕ್ರಮ ವಿಷಯದ ಪ್ರಸ್ತಾಪ ಮಾಡಿ ಬಿಜೆಪಿ ಉಭಯ ಸದನಗಳಲ್ಲಿಯೂ ಹೋರಾಟ ಮಾಡಲು ಮುಂದಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್