LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಂಪುಟದ ಸದಸ್ಯರೊಬ್ಬರು ಯತ್ನಾಳ್ ಗೆ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪಿಸಲು ಹೇಳಿದ್ರು: ಬಿಜೆಪಿ ಶಾಸಕ ಸುರೇಶ್‌ಗೌಡ

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರುವ ವಿಷಯವನ್ನು ಪ್ರಸ್ತಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸದಸ್ಯರೊಬ್ಬರು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೂಚಿಸಿದ್ದಾರೆ ಎಂದು ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಶುಕ್ರವಾರ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತರು ಯತ್ನಾಳ್ ಅವರಿಗೆ ಚಿಟ್ ಕಳುಹಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ, ಆಡಳಿತ ಪಕ್ಷದ ಕಡೆಯಿಂದ ಚೀಟಿ, ನಮ್ಮ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಂತು. ಅದಾದ ನಂತರವೇ ಯತ್ನಾಳ್ ಅವರು ಈ ವಿಚಾರಕ್ಕೆ ಸಂಬಂಧ ಮಾತನಾಡಲು ಆರಂಭಿಸಿದ್ದು ಎಂದು ಆರೋಪಿಸಿದ್ದಾರೆ.ಆಡಳಿತ ಪಕ್ಷದ ಯಾರು ಯತ್ನಾಳ್ ಅವರಿಗೆ ಚೀಟಿ ಕಳುಹಿಸಿಕೊಟ್ಟಿದ್ದು, ಅದರ ತನಿಖೆಯಾಗಬೇಕು. ಇದು ಎಲ್ಲರಿಗೂ ಅಗೌರವ ಕೊಡುವ ಮತ್ತು ಗಂಭೀರ ವಿಚಾರ ಇದಾಗಿದೆ. ಸ್ಪೀಕರ್ ಅವರು ಇದರ ಬಗ್ಗೆ ಗಮನ ಕೊಡಬೇಕು, ಇದನ್ನು ತನಿಖೆಗೆ ಒಳಪಡಿಸಬೇಕು. ಇದರಿಂದಾಗಿ, ಚೀಟಿ ಕಳುಹಿಸಿದ ಸಚಿವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದು ಸುರೇಶ್ ಗೌಡ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಾರ್ಟಿಯಲ್ಲಿ ಏನಾಗುತ್ತಿದೆ ಎನ್ನುವುದು ಗೊತ್ತಾಗಬೇಕಿದೆ, ಇದನ್ನು ಕಡೆಗಣಿಸುವಂತಿಲ್ಲ. ಚೀಟಿ ಕಳುಹಿಸಿದವರು ಯಾರು, ಮುಖ್ಯಮಂತ್ರಿಗಳಿಗೆ ಆಪ್ತರಾಗಿರುವವರಾ ಎನ್ನುವ ಪ್ರಶ್ನೆಯನ್ನು ಸುರೇಶ್ ಗೌಡ ಎತ್ತಿದರು. ಆಗ ಮಧ್ಯ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಸುನೀಲ್ ಕುಮಾರ್ ಏನೋ ಈ ವಿಚಾರವನ್ನು ಪ್ರಸ್ತಾವಿಸಿದರು. ಎಲ್ಲರೂ ಈ ವಿಚಾರದ ಬಗ್ಗೆ ಮಾತನಾಡಬೇಕಾ ಎಂದು ಸುರೇಶ್ ಗೌಡ ಅವರನ್ನು ಕೂರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ