LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜಮನೆತನದ ಬಗ್ಗೆ ಅಸಡ್ಡೆ; ಸಿದ್ದರಾಮಯ್ಯ, ಮಹದೇವಪ್ಪ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು, ಆಗಸ್ಟ್ 4: ಕೆಆರ್​ಎಸ್ ಡ್ಯಾಂಗೆ  ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿಗಳ ಹಿಂಬಾಲಕ ಸಚಿವ ಹೆಚ್. ಸಿ. ಮಹದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ)ನಿರ್ಮಾಣದ ಹಿಂದಿನ ತ್ಯಾಗ- ಪರಶ್ರಮದ ಇತಿಹಾಸ ಹಾಗೂ ನಾಲ್ವಡಿಯವರ ಕೊಡುಗೆಯನ್ನು ಅಪಮಾನಿಸಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

‘ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ರೋಚಕ ಇತಿಹಾಸವಿದೆ, ತ್ಯಾಗ ಮೆರೆದ ಹೆಗ್ಗಳಿಕೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ಹಾಗೂ ಪರಿಶ್ರಮದ ಫಲವೇ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ) ನಿರ್ಮಾಣವಾಯಿತು ಎಂಬುದಕ್ಕೆ ಐತಿಹಾಸಿಕ ದಾಖಲೆಗಳಿವೆ, ತ್ಯಾಗ, ಕೊಡುಗೆಗಳ ಹೆಗ್ಗಳಿಕೆಯಿದೆ. 1908 ರಲ್ಲಿ ರೂಪಿಸಲಾದ ಯೋಜನೆಯನ್ನು ಮತ್ತಷ್ಟು ಪರಿವರ್ತಿಸಿ ಹತ್ತು ಹಲವು ಅಡ್ಡಿ ಆತಂಕ ತೊಂದರೆ ಅವಮಾನಗಳ ನಡುವೆ ಬ್ರಿಟಿಷ್ ಆಡಳಿತದಿಂದ ಅನುಮತಿ ಪಡೆದುಕೊಂಡ ಹಿನ್ನೆಲೆಯ ಪ್ರತಿ ಹೆಜ್ಜೆಗಳಿಗೂ ಪುಟ ಪುಟಗಳ ದಾಖಲೆಗಳು ಇಂದಿಗೂ ಜೀವಂತವಾಗಿವೆ’ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ