LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

'ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ' ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜೂನ್‌ 24: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ್ದ ಕಾಂಗ್ರೆಸ್ ಪಕ್ಷ ಮತ್ತು​ ನಾಯಕ ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರಿಗೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾ ಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು.

ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ನಮ್ಮ ಇಡೀ ಕುಟುಂಬದಲ್ಲಿ ಆರ್‌ಎಸ್‌ಎಸ್‌ನವರೇ ಇದ್ದರು. ಅವರು ಕೂಡ ತಲೆಮರೆಸಿಕೊಳ್ಳಬೇಕಾಯಿತು. ನಾನು ಒಂದು ತಿಂಗಳು ಸ್ವಾತಂತ್ರ್ಯ ಉದ್ಯಾನದ ಜೈಲಿನಲ್ಲಿದ್ದೆ. 200 ಜನರಿಗೆ ಒಂದು ಶೌಚಾಲಯವಿತ್ತು. ಊಟ ಕೂಡ ಕೊಡುತ್ತಿರಲಿಲ್ಲ. ಆ ಕಷ್ಟಗಳು ಈಗಲೂ ನೆನಪಿನಲ್ಲಿದೆ. ಜನರಿಗೆ ಅಷ್ಟು ಕಿರುಕುಳ ನೀಡಿದ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ ಎಂದು ಕಿಡಿಕಾರಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ