LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಚನ್ನಮ್ಮನ ಕಿತ್ತೂರ: ಇಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ಪೆಟ್ರೋಲ್ ಇಲ್ಲದದ್ವಿ ಚಕ್ರವಾಹನವನ್ನು ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕಾರ್ಯಕರ್ತರು. ಚನ್ನಮ್ಮನ ಕಿತ್ತೂರ. ಪೆಟ್ರೋಲ್, ಡಿಜೆಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಬಿಜೆಪಿ ಮಂಡಳ ವತಿಯಿಂದ ಕಿತ್ತೂರಿನ ರಾಷ್ಟ್ರೀಯ ಹೆದ್ದಾರೆ ಪಕ್ಕದ ಚನ್ನಮ್ಮಾಜಿಯ ವರ್ತುಳದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಗುರುವಾರ ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೇಸ್‌ನ್ನು ಹಿನಾಯವಾಗಿ ಸೋಲಿಸಿದ್ದಕ್ಕಾಗಿ ಎಲ್ಲ ದರಗಳನ್ನು ಏರಿಕೆಗೊಳಸಿ ದ್ವೇಷದ ರಾಜಕಾರವನ್ನು ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಂದ ತೆರಿಗೆಯನ್ನು ವಸೂಲಿ ಮಾಡುವ ಕ್ರಮ ಕೈಗೊಂಡಿದ್ದಾರೆ.

ಮುಖ್ಯ ಮಂತ್ರಿಗಳು ಇಂಧನ ಬೆಲೆ ಏರಿಕೆ ಮಾಡಿದ ರಾಜ್ಯಗಳನ್ನು ಹೋಲಿಕೆ ಮಾಡುವದನ್ನು ಬಿಟ್ಟು ಕಡಿಮೆ ಇದ್ದ ರಾಜ್ಯಗಳ ಹೋಲಿಕೆ ಮಾಡಿ ದರ ಕಡಿಮೆಗೊಳಿಸಬೇಕು ಹೀಗಾದರೆ ನೀವು ಜನರ ಶಾಪದಿಂದ ನಿಮ್ಮ ಕುರ್ಚಿಗಳನ್ನು ಬಿಟ್ಟು ಇಳಿಯಬೇಕಾಗುವದು ಎಂದು ಎಚ್ಚರಿಸಿದರು.

ಮಂಡಳ ಅದ್ಯಕ್ಷ ಬಸವರಾಜ ಪರವಣ್ಣವರ ಮಾತನಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರಳು ಮಾಡಿ ಸರಕಾರ ರಚಿಸಿ ಈಗ ದರಗಳನ್ನು ಏರಿಕೆ ಮಾಡಿ ಜನರನ್ನು ದಿವಾಳಿಯನ್ನಾಗಿ ಮಾಡುತ್ತಿದೆ. ಈಗಿನ ತಂತ್ರಜ್ಞಾನ ಯುಗದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ಎಲ್ಲ ರೈತರು ಡಿಸೈಲ್, ಪೆಟ್ರೋಲ್ ಮೇಲೆ ಅವಲಂಬಿತರಾಗಿದ್ದಾರೆ ಹೀಗಿರುವಾಗ ದರ ಏರಿಕೆ ಮಾಡಿ ಸರಕಾರವು ರೈತರಿಗೆ ಅನ್ಯಾಯ ಮಾಡುತ್ತಿದೆ ತಕ್ಷಣ ದರಗಳನ್ನು ಕಡಿಮೆಗೊಳಿಸಬೇಕು ಇಲ್ಲದಿದ್ದರೆ ಬಿಜೆಪಿಯಿಂದ ನಿರಂತರ ಹೋರಾಟ ನಡೆಸಬೇಕಾಗುತ್ತದೆ ಎಂದರು.

ಬಿಜೆಪಿ ನಾಯಕಿ ಲಕ್ಷ್ಮೀ ಇನಾಮದಾರ ಮಾತನಾಡಿದರು. ಸಂದೀಪ ದೇಶಪಾಂಡೆ, ಎಸ್ ಆರ್ ಪಾಟೀಲ, ನಿಜಲಿಂಗಯ್ಯ  ಹಿರೇಮಠ, ಅರುಣಕುಮಾರ ಬಿಕ್ಕಣ್ಣವರ, ಸರಸ್ವತಿ ಹೈಬತ್ತಿ, ಉಮಾದೇವಿ ಬಿಕ್ಕಣ್ಣವರ, ರವೀರಾಜ ಇನಾಮದಾರ, ಯಲ್ಲಪ್ಪ  ವಕ್ಕುಂದ, ಫಕ್ಕೀರ ಜಾಂಗಟಿ, ಹರ್ಷಾ ಕರೀಕಟ್ಟಿ, ಬಸವರಾಜ
ಪುಟ್ಟಿ, ಕಿರಣ ಪಾಟೀಲ, ಶಿವಾನಂದ ಹನಮಸಾಗರ, ಶ್ಯಾಮ ಶಿಲೇದಾರ, ದಿನೇಶ ವಳಸಂಗ, ನಾಗೇಶ ಬೆಣ್ಣಿ, ಸೇರಿದಂತೆ ಇತರರು ಇದ್ದರು.

ಈ ವಾಹನದ ಮೇಲೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಮಂಡಳ ಅಧ್ಯಕ್ಷ ಡಾ. ಬಸವರಾಜ ಪರವಣ್ಣವರ ಇವರನ್ನು ಈ ವಾಹನದ ಮೇಲೆ ಕೂಡ್ರಿಸಿ ಹಗ್ಗದಿಂದ ಎಳೆಯುವ ಮೂಲಕ ವಿನೂತನ ಪ್ರತಿಭಟನೆಯನ್ನು ನಡೆಸಿ ನಂತರ ಸರಕಾರದ ವಿರುದ್ದ  ಘೋಷಣೆಗಳನ್ನು ಕೂಗುತ್ತ ತಹಶೀಲ್ದಾರ
ಕಚೇರಿಗೆ ತೆರಳಿ ತಹಶೀಲ್ದಾರ ರವೀಂದ್ರ ಹಾದಿಮನಿ ಇವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ