LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಯನ್ನು ಸೋಲಿಸಲು ನಮ್ಮ ಭರವಸೆಗಳೇ ಬ್ರಹ್ಮಾಸ್ತ್ರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ02: ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು 'ಬ್ರಹ್ಮಾಸ್ತ್ರ' ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನಮ್ಮ ಜನಪರ ಪ್ರಣಾಳಿಕೆ ನೋಡಿ ಪ್ರಧಾನಿ ಮೋದಿಯವರು ನಿರಾಶರಾಗಿದ್ದಾರೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಪ್ರಾರಂಭಿಸಿದ್ದಾರೆ. ಆ ಭಗವಂತನನ್ನು ದಿನಕ್ಕೆ ಎಷ್ಟು ಬಾರಿ ಅವರು ನೆನಸುತ್ತಾರೆ ಗೊತ್ತಿಲ್ಲಾ, ಆದರೆ ಅದಕ್ಕಿಂತ ಹೆಚ್ಚು ಬಾರಿ ಅವರು ಕಾಂಗ್ರೆಸ್ ಪಕ್ಷವನ್ನ ಹೀಯಾಳಿಸೋದು ಸತ್ಯಪ್ರತಿ ದಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ನನ್ನನ್ನ ದೂಷಿಸುತ್ತಾರೆ. ಈ ಮೂಲಕ ಜನರಲ್ಲಿ ನಮ್ಮ ವಿರುದ್ದ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಜಾರಿಗೆ ತರಲು ಸಾಧ್ಯವಾಗದ ಆಶ್ವಾಸನೆಗಳನ್ನು ಪ್ರಧಾನಿ ನೀಡಲಾರಂಭಿಸಿದ್ದಾರೆ. 2014 ಮತ್ತು 2019ರಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಠೇವಣಿ ಇಟ್ಟಿರುವ ಕಪ್ಪುಹಣದಿಂದ ಪ್ರತಿಯೊಬ್ಬ ನಾಗರಿಕರಿಗೆ 15 ಲಕ್ಷ ರೂ ಹಣವನ್ನು ಖಾತೆಗೆ ಹಾಕುವುದಾಗಿ ಹೇಳಿದ್ದರು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹಾಗೂ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ‘ಮೋದಿ ಸುಳ್ಳಿನ ಸರದಾರ’ ಎಂಬುದನ್ನು ಮೋದಿ ಸಾಬೀತು ಮಾಡಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371ಜೆ ವಿಧಿಯನ್ನು ತಿದ್ದುಪಡಿ ಮಾಡುವಲ್ಲಿ ದಿವಂಗತ ಧರ್ಮ್ ಸಿಂಗ್ ಹಾಗೂ ಕಾಂಗ್ರೆಸ್‌ ನಾಯಕರ ಪಾತ್ರ ಪ್ರಮುಖವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಮೋದಿ ಸರ್ಕಾರ ಬರ ಪರಿಹಾರ ಘೋಷಣೆಯಲ್ಲಿ ವಿಳಂಬ ಮಾಡುವ ಮೂಲಕ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. “ನಾವು ಬರ ಪರಿಹಾರವನ್ನು ಪಡೆಯಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕು. ಇದೀಗ ಕೇಂದ್ರವು ಪರಿಹಾರವಾಗಿ ಅಲ್ಪ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ವಿಚಾರವನ್ನು ಕರ್ನಾಟಕ ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದಿದೆ ಎಂದು ಸಿಎಂ ಹೇಳಿದರು. ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಮೋದಿ ವಿವಿಧ ಜಾತಿ, ಸಮುದಾಯಗಳ ನಡುವೆ ದ್ವೇಷ ಉಂಟು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ