LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!

ಕೊಪ್ಪಳ: ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ತಿಳಿಸಿ ಉಕ್ಕು ಸ್ಥಾವರದ ಕೆಲಸವನ್ನು ನಿಲ್ಲಿಸುವಂತೆ ಮನವಿ ಮಾಡಿದರು.

ಕಳೆದ ತಿಂಗಳಷ್ಟೇ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ 54,000 ಕೋಟಿ ರೂ. ವೆಚ್ಚದಲ್ಲಿ ಸ್ಥಾವರವನ್ನು ಸ್ಥಾಪಿಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿತ್ತು. ಸ್ಥಾವರವು ಸ್ಥಾಪನೆಯಾದರೆ, ಮಾಲಿನ್ಯ ಮತ್ತಷ್ಟು ಹೆಚ್ಚಾಗುತ್ತದೆ ಎಂದು ನಿವಾಸಿಗಳು ದೂರಿದ್ದಾರೆ, ಈಗಾಗಲೇ ಪಟ್ಟಣವು ಈಗಾಗಲೇ ಅನೇಕ ಕೈಗಾರಿಕೆಗಳಿಂದಾಗಿ ಆರೋಗ್ಯದ ಅಪಾಯವನ್ನು ಎದುರಿಸುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮತ್ತು ಇತರರು ಸ್ಥಾವರದ ಅಪಾಯಗಳ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿದರು, ಸಿದ್ಧರಾಮಯ್ಯ ತಕ್ಷಣವೇ ಕೊಪ್ಪಳ ಜಿಲ್ಲಾಧಿಕಾರಿಗೆ ಎಲ್ಲಾ ಪೂರ್ವಸಿದ್ಧತಾ ಕಾರ್ಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್