LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಬಂಧನ

ನವದೆಹಲಿ,ಏಪ್ರಿಲ್ 11:  ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ  ಇಡಿಯಿಂದ  ಬಂಧನಕ್ಕೊಳಗಾಗಿ ತಿಹಾರ್​ ಜೈಲಿನಲ್ಲಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ  ಅವರನ್ನು ಸಿಬಿಐ ಬಂಧಿಸಿದೆ.

ಜಾರಿ ನಿರ್ದೇಶನಾಲಯ ಬಂಧಿಸಿದ ಬಳಿಕ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಶನಿವಾರ ಆಕೆಯನ್ನು ಸಿಬಿಐ ಜೈಲಿನೊಳಗೆ ವಿಚಾರಣೆಗೊಳಪಡಿಸಿತ್ತು, ಇಂದು ಬಂಧಿಸಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರವೇ (ಏಪ್ರಿಲ್ 8) ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು, ಪ್ರಾಥಮಿಕ ದೃಷ್ಟಿಯಲ್ಲಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ತೋರುತ್ತದೆ ಎಂದು ವಕೀಲರು ಹೇಳಿದ್ದರು.

ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ 6 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆ ಬಳಿಕ ಇಂದು ತಿಹಾರ್ ಜೈಲಿನಿಂದ ಕೆ. ಕವಿತಾ ಬಂಧಿಸಲಾಗಿದೆ. ಬಿಆರ್‌ಎಸ್ ನಾಯಕ ಕೆ. ಕವಿತಾ ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಏಪ್ರಿಲ್ 5 ರಂದು ಕವಿತಾ ಅವರನ್ನು ಜೈಲಿನಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿತ್ತು.

ಇದಲ್ಲದೇ ಸಾಕ್ಷ್ಯ ನಾಶಪಡಿಸುವ ಪ್ರಯತ್ನವೂ ನಡೆದಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಪರಿಹಾರವನ್ನು ನೀಡಿದರೆ ಅವರು ಭವಿಷ್ಯದಲ್ಲಿಯೂ ಇದನ್ನು ಮಾಡಬಹುದು ಎಂದಿದ್ದರು.

ಮದ್ಯದ ಪರವಾನಗಿಯಲ್ಲಿ ಹೆಚ್ಚಿನ ಪಾಲು ಪಡೆಯಲು ದೆಹಲಿಯ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪ ಹೊತ್ತಿರುವ ಕೆ ಕವಿತಾ ಸೌತ್ ಗ್ರೂಪ್‌ನ ಪ್ರಮುಖ ಸದಸ್ಯೆ ಎಂದು ಇಡಿ ಹೇಳಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.

ಮದ್ಯದ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಕೇಜ್ರಿವಾಲ್ ಅವರನ್ನು ಪ್ರಕರಣದ ಪ್ರಮುಖ ಕಿಂಗ್​ಪಿನ್​ ಎಂದು ಇಡಿ ಬಣ್ಣಿಸಿದೆ

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ