LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಪ್ರಗತಿಗೆ ಪೂರಕ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್


•  *ಮಹಿಳೆಯರ- ಮಕ್ಕಳ ಅಭ್ಯುದಯಕ್ಕೆ ಆದ್ಯತೆ*

*• ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಹಾಯಧನೆ ಹೆಚ್ಚಳ*

*ಬೆಂಗಳೂರು* : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು, ರಾಜ್ಯದ ಪ್ರಗತಿಗೆ ಪೂರಕವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಬಜೆಟ್ ನಲ್ಲಿ ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


*• ಗೃಹಲಕ್ಷ್ಮೀಗೆ ಹಣ ನಿಗದಿ*


ಮಹಿಳೆಯರ ಆರ್ಥಿಕ ಸಬಲೀಕರಣದ ಹಿನ್ನೆಲೆಯಲ್ಲಿ  ಕುಟುಂಬ ನಿರ್ವಹಣೆಗೆ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡುವ ಗೃಹಲಕ್ಷ್ಮೀ ಯೋಜನೆಗೆ ನಿರೀಕ್ಷೆಯಂತೆ ಹಣ ಕಾಯ್ದಿರಿಸಲಾಗಿದೆ.  ಈ ಯೋಜನೆಗೆ ಈ ವರ್ಷ 28,608 ಕೋಟಿ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


*• ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪರ ಕಾಳಜಿ*

ರಾಜ್ಯದಲ್ಲಿ ಅಂಗನವಾಡಿ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಅತ್ಯಂತ ಮಹತ್ತರ ಪಾತ್ರ ವಹಿಸುತ್ತಿರುವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡುವುದು ನಿಜಕ್ಕೂ ಹರ್ಷದ ಸಂಗತಿ. ರಾಜ್ಯದ 37 ಲಕ್ಷ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ತಿಂಗಳಿಗೆ 1 ಸಾವಿರ ರೂಪಾಯಿ ಹಾಗೂ ಸಹಾಯಕಿಯರ ಗೌರವಧನ 750 ಹೆಚ್ಚಿಸಲಾಗಿದೆ. ಈ ಮೂಲಕ ಆ ವರ್ಗದವರ ಅಭ್ಯುದಯಕ್ಕೆ ಸಹಾಯವಾಗಲಿದ್ದು, ಇದು ಮುಖ್ಯಮಂತ್ರಿಯವರ ಜನಪರ ಕಾಳಜಿ ಎತ್ತಿ ತೋರಿಸಿದೆ ಎಂದು ತಿಳಿಸಿದ್ದಾರೆ.



*• ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಸೂಕ್ತ*

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ತಲಾ ಒಂದು ಲಕ್ಷ ರೂಪಾಯಿಯಂತೆ ಒಟ್ಟು 175 ಕೋಟಿ ರೂಪಾಯಿ ಒದಗಿಸಿರುವುದು ಅನುಕೂಲಕರವಾಗಿದೆ. ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಖರೀದಿಸಲು 10 ಕೋಟಿ ರೂಪಾಯಿ ಮೀಸಲಿರಿಸಿರುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದ್ದಾರೆ.


*• ಬೆಳಗಾವಿ-ಮೈಸೂರು ವಿಶೇಷ ಮಕ್ಕಳ ವಸತಿ ಶಾಲೆ ಮೇಲ್ದರ್ಜೆ*

ನಮ್ಮ ಮುಖ್ಯಮಂತ್ರಿಯವರು ವಿಶೇಷಚೇತನರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ತಲಾ 5 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.  ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು. ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಿರುವುದು ಉತ್ತಮ ಬೆಳೆವಣೆಗೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟರೆ ಎಲ್ಲ ಇಲಾಖೆಗಳಿಗೂ ಆದ್ಯತೆಯ ಮೇಲೆ ಅನುದಾನ ಹಂಚಿಕೆ ಮಾಡುವ ಮೂಲಕ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್