LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಐಎಎಸ್​ ಕೋಚಿಂಗ್ ನ ಅಕ್ರಮ ಕಟ್ಟಡದ ವಿರುದ್ಧ ಬುಲ್ಡೋಜರ್ ಕ್ರಮ

ದೆಹಲಿಯ ಓಲ್ಡ್​ ರಾಜಿಂದರ್ ನಗರದಲ್ಲಿರುವ ರಾವು ಅವರ ಐಎಎಸ್​ ಕೋಚಿಂಗ್ ಸೆಂಟರ್​ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಐಎಎಸ್​ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರರಕಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಕಟ್ಟಡದ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಕೋಚಿಂಗ್ ಸೆಂಟರ್​ನ ಸಂಯೋಜಕ ದೇಶಪಾಲ್​ ಸಿಂಗ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ರಾವು ಅವರ ಐಎಎಸ್ ಸ್ಟಡಿ ಸೆಂಟರ್ ಬಳಿಯ ಅತಿಕ್ರಮಣಗಳನ್ನು ತೆಗೆದುಹಾಕಲು ಬುಲ್ಡೋಜರ್ ಕ್ರಮ ಪ್ರಾರಂಭವಾಗಿದೆ

ಕಾರ್ಯಾಚರಣೆಗೆ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು. ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ ಮತ್ತು ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ.

ಕಟ್ಟಡದ ವಿವಿಧ ಮಹಡಿಗಳನ್ನು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಕಟ್ಟಡದ ರಚನೆ ಮತ್ತು ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸ್ಥಳೀಯ ಪುರಸಭೆಯ ಪಾತ್ರವನ್ನು ಪರಿಶೀಲಿಸುತ್ತಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಯು ಕಟ್ಟಡ ಮತ್ತು ಅದರ ನೆಲಮಾಳಿಗೆಯನ್ನು ಪರಿಶೀಲಿಸುತ್ತಿದೆ, ಇದನ್ನು ಅಕ್ರಮವಾಗಿ ಗ್ರಂಥಾಲಯವಾಗಿ ಬಳಸಲಾಗುತ್ತಿತ್ತು. ಈ ಪ್ರದೇಶದ ಒಳಚರಂಡಿ ವ್ಯವಸ್ಥೆ ಕುರಿತು ಪೊಲೀಸರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿ ಮಾಹಿತಿ ಕೋರಿ ನೋಟಿಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

ಕಾರ್ಯಾಚರಣೆ ನಡೆಸಲು ದೆಹಲಿ ಪೊಲೀಸರು ಪೂರ್ವಾನುಮತಿ ನೀಡಿದ ನಂತರ ಬುಲ್ಡೋಜರ್‌ಗಳು ಕೋಚಿಂಗ್ ಸೆಂಟರ್ ಬಳಿ ಅತಿಕ್ರಮಣಗಳನ್ನು ತೆಗೆದುಹಾಕುತ್ತಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ಕೋಚಿಂಗ್ ಸೆಂಟರ್‌ನಲ್ಲಿ ಸುರಕ್ಷತೆ ಉಲ್ಲಂಘನೆ ಮತ್ತು ಅಕ್ರಮ ಬೇಸ್‌ಮೆಂಟ್ ಕಾರ್ಯಾಚರಣೆಗಳು ಸಾವಿಗೆ ಕಾರಣವಾಗಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್