LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಕರೆ

ಬಳ್ಳಾರಿ,ಜೂ20:: ಸಮಾಜದಲ್ಲಿ ಮಹಿಳೆಯರಿಗಿರುವ ಹಲವು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರಿನ ಒಂದೆಡೆ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಕ್ಕೆöÊ ಪದ್ಮಶಾಲಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ, ಯುಜಿ ಇಂಗ್ಲೀಷ್ ಶಿಕ್ಷಕರ ಸಂಘ ಹಾಗೂ ಇಂಗ್ಲೀಷ್ ಹಳೆಯ ವಿದ್ಯಾರ್ಥಿಗಳು ಜಂಟಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ‘ಬಾಡಿ ಆ್ಯಂಡ್ ಲಿಟ್‌ರೆಚರ್’ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರು, ದಲಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಗೌರವ, ಹಕ್ಕು ಸ್ವಾತಂತ್ರö್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಹಲವಾರು ನೈತಿಕ ವಿಚಾರಗಳ ಕುರಿತು ವಿದ್ಯಾರ್ಥಿಗಳು, ಸಂಶೋಧಕರು ಗಂಭೀರವಾಗಿ ಚಿಂತನೆ ನಡೆಸಿ, ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಹೇಳಿದರು.
ವಿವಿಯ ಕುಲಸಚಿವ ಪ್ರೊ.ವಿ.ಲೋಕೇಶ್, ಕಲಾ ನಿಕಾಯದ ಡೀನರಾದ ಪ್ರೊ ರಾಬರ್ಟ್ ಜೋಸ್, ಯುಜಿ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವರಾಜ್ ಟಿ.ಎಚ್ ವೇದಿಕೆಯಲ್ಲಿದ್ದರು.
ಇಂಗ್ಲೀಷ್ ಅಧ್ಯಯನ ವಿಭಾಗದ ಡಾ.ಸಂತೋಷ ಜಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ನಿಹಾರಿಕಾ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಾತ್ಸಲ್ಯ ಆರ್ ವಂದಿಸಿದರು.
ವಿವಿಧ ಕಾಲೇಜುಗಳ ಇಂಗ್ಲೀಷ್ ಪ್ರಾಧ್ಯಾಪಕರು ಸೇರಿದಂತೆ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಕನ್ನಡ, ಇಂಗ್ಲೀಷ್ ಮತ್ತು ನಾಟಕ ಹಾಗೂ ಪ್ರದರ್ಶನ ಕಲೆ ಅಧ್ಯಯನ ವಿಭಾಗದ ಎಲ್ಲ ಬೋಧಕ -ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್