LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ: ವಿಧಾನ ಸಭಾಧ್ಯಕ್ಷರಿಗೆ ಕೊರವರ ಪತ್ರ

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ ಕುಲಕರ್ಣಿ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಆದೇಶ ಪ್ರತಿ, ಸುಪ್ರೀಂ ಕೋರ್ಟ್ ನಲ್ಲಿ ಥಾಮಸ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಗಳನ್ನು ಪತ್ರದೊಂದಿಗೆ ಲಗತ್ತಿಸಿರುವ ಅವರು, ಕೂಡಲೇ ಶಾಸಕ ವಿನಯ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಿ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಅನ್ವಯವಾದ ನಿಯಮ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೂ ಅನ್ವಯಿಸಲಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಕೊರವರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯವು ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಅವರ ಅನರ್ಹತೆ ಜಾರಿಗೆ ಬರಲಿದೆ. ಆದರೆ, ನ್ಯಾಯಾಲಯದ ತೀರ್ಪಿನ ವಿರುದ್ಧ ಎಂಬಂತೆ ಅವರ ಅಭಿಮಾನಿಗಳು ಧಾರವಾಡದಲ್ಲಿ ಶನಿವಾರ ಶಾಸಕ ವಿನಯ ಕುಲಕರ್ಣಿ ಜನಪ್ರಿಯ ಶಾಸಕರು ಎಂದು ನಮೂದಿಸಿ ನ್ಯಾಯಾಂಗದ ಘನತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಸಭಾಧ್ಯಕ್ಷರು ಶಾಸಕ ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಕ್ಷೇತ್ರವನ್ನು ತೆರವುಗೊಳಿಸಲಾಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿನಂತಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ