LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜನ ಗಣತಿ ಜೊತೆಗೆ ಜಾತಿ ಗಣತಿ; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್​ ದಿನಾಂಕವನ್ನು ಪ್ರಕಟಿಸಲು ಆಗ್ರಹ


ನವದೆಹಲಿ: ಜನ ಗಣತಿ ಜೊತೆಗೆ ಜಾತಿ ಗಣತಿ ನಡೆಸುವುದಾಗಿ ಪ್ರಕಟಿಸಿರುವ ಕೇಂದ್ರ ಸರ್ಕಾದ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್​, ಗಣತಿ ನಡೆಸುವ ದಿನಾಂಕವನ್ನು ಪ್ರಕಟಿಸಲು ಆಗ್ರಹಿಸಿದೆ.


ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಪಕ್ಷವು, "ಡೆಡ್​​ ಲೈನ್​ ನೀಡದೆ ಹೆಡ್​​ ಲೈನ್​​" ನೀಡುವುದರಲ್ಲಿ ನಿಪುಣರು. ಜಾತಿ ಮತ್ತು ಜನ ಗಣತಿ ಯಾವಾಗ ನಡೆಯುತ್ತದೆ ಎಂಬುದರ ದಿನಾಂಕವನ್ನು ಸರ್ಕಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.


"ಸರ್ಕಾರದ ಉದ್ದೇಶದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ. ಜನಗಣತಿಯನ್ನು ಸಾಧ್ಯವಾದಷ್ಟು ಬೇಗ ಮಾಡಬೇಕು. ಪ್ರಧಾನಿ ಮೋದಿ ಅವರು ಬರಿಯ ಹೆಡ್​ ಲೈನ್​ ನೀಡುತ್ತಾರೆ. ಡೆಡ್​​ ಲೈನ್​ ನೀಡುವುದಿಲ್ಲ. ಮೀಸಲಾತಿಗೆ ಇರುವ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕಬೇಕು. ಇದನ್ನು ಮಾಡಲು ಕೇಂದ್ರಕ್ಕೆ ಏನು ಅಡ್ಡಿ ಇದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಶ್ನಿಸಿದ್ದಾರೆ.


ದೆಹಲಿಯ ಕಾಂಗ್ರೆಸ್​ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಂವಿಧಾನಕ್ಕೆ ತಿದ್ದುಪಡಿ ತಂದು, ಮೀಸಲಾತಿ ಮೇಲಿನ ಶೇ.50ರಷ್ಟು ಮಿತಿಯನ್ನು ತೆಗೆದುಹಾಕಬೇಕು. ಆಗ ಮಾತ್ರ ಜಾತಿ ಜನಗಣತಿಗೆ ಅರ್ಥ ಬರಲಿದೆ" ಎಂದರು.











Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್