LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಿಎಸ್​ಐ ಪರಶುರಾಮ ಸಾವ ಪ್ರಕರಣದಲ್ಲಿ ಸಿಬಿಐಗೆ ನೀಡುವ ಅರ್ಹತೆ ಇಲ್ಲ

ಕೊಪ್ಪಳ, ಆಗಸ್ಟ್​​​ 07: ಯಾದಗಿರಿ ಪಿಎಸ್​ಐ ಪರಶುರಾಮ  ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ  ಅವರ ಜೊತೆ ಮಾತನಾಡುತ್ತೇನೆ. ಗೃಹ ಇಲಾಖೆ ಹಾಗೂ ಸರ್ಕಾರದಿಂದ 50 ಲಕ್ಷ ಹಣ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು (ಆ.07) ಮೃತ ಪಿಎಸ್​ಐ ಪರಶುರಾಮ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ತನಿಖೆಗೆ ಆದೇಶ ಮಾಡಿದ್ದೇನೆ. ಆರೋಪ ಕೇಳಿಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಕೂಡ ಹಣ ತೆಗೆದುಕೊಂಡು ವರ್ಗಾವಣೆ ಮಾಡಲ್ಲ. ವರ್ಗಾವಣೆಗೆ ಎರಡು ವರ್ಷ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.


ನಾನು ವಿರೋಧ ಪಕ್ಷದವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ. ಅವರಿಗೆ ನ್ಯಾಯ ಸಿಗದೆ ಇದ್ದರೆ ಮುಂದೆ ನೋಡೋಣ. ಪರಶುರಾಮ ಅವರು ಏಳು ತಿಂಗಳಲ್ಲೇ ಹೇಗೆ ವರ್ಗಾವಣೆಯಾದರು ಅಂತ ನನಗೆ ಗೊತ್ತಿಲ್ಲ. ಅವದಿಗೂ ಮೊದಲೇ ವರ್ಗಾವಣೆ ಬಗ್ಗೆ ಕೂಡ ಸಿಐಡಿ ತನಿಖೆಯಲ್ಲಿ ಹೊರಗೆ ಬರುತ್ತದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್