LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪರಪ್ಪನ ಅಗ್ರಹಾರ ಜೈಲಿನ  ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ

ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಬೆಂಗಳೂರಿನ  ಪರಪ್ಪನ ಅಗ್ರಹಾರ ಜೈಲಿನ  ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್​​ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹದ ಒಳಗಿನಿಂದ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಮತ್ತು ಮೊಬೈಲ್ ಬಳಕೆಯನ್ನು ಪರಿಶೀಲಿಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆಯೂ ಸಿಸಿಬಿ ದಾಳಿ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಗಳು ತಿಳಿಸಿವೆ. ಶಿವಮೊಗ್ಗದಲ್ಲಿ ಐಎಸ್​ಐಎಸ್ ಉಗ್ರ ಚಟುವಟಿಕೆಗೆ ಸಂಬಂಧಿಸಿ ಶಂಕಿತ ಉಗ್ರನೊಬ್ಬನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಎನ್​ಐಎ ಇತ್ತೀಚೆಗೆ ಬಂಧಿಸಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್