LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೊಹರಂ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ: ಪಿಎಸ್ಐ ಗಿರಮಲಪ್ಪ ಉಪ್ಪಾರ ಕರೆ

ಅಥಣಿ: ತಾಲೂಕಿನ ಶಿವಯೋಗಿಗಳ ಕ್ಷೇತ್ರವಾದ ಅಥಣಿಯಲ್ಲಿ ಸರ್ವ ಧರ್ಮೀಯರೂ ಸದಾ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ಹೆಮ್ಮೆಯ ವಿಷಯ. ಅದೇ ಪರಂಪರೆಯನ್ನು ಮುಂದುವರಿಸಿಕೊಂಡು, ಈ ಬಾರಿಯ ಮೊಹರಂ ಹಬ್ಬವನ್ನು ಪರಸ್ಪರ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅಥಣಿ ಪೊಲೀಸ್ ಉಪನಿರೀಕ್ಷಕ ಗಿರಮಲಪ್ಪ ಉಪ್ಪಾರ ಮನವಿ ಮಾಡಿದರು.
ಅಥಣಿ ಪೊಲೀಸ್ ನಿರೀಕ್ಷಣಾ ಮಂದಿರದಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
"ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕರಿಸಬೇಕು. ಒಂದು ವೇಳೆ ಹಬ್ಬದ ಹೆಸರಿನಲ್ಲಿ ಶಾಂತಿ ಭಂಗ ಉಂಟುಮಾಡುವ ಅಥವಾ ಅಹಿತಕರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಸಯ್ಯದ ಅಮೀನ ಗದ್ಯಾಳ, ಅಸ್ಲಮ ನಾಲಬಂದ, ಶಶಿ ಸಾಳವೆ,ಶೇಖರ್ ಸೌದಾಗರ, ಅಯಾಜ ಮಾಸ್ಟರ್,ಶಬ್ಬೀರ ಸಾತಬಚ್ಚೆ,ಶಿವಾನಂದ ಸೌದಾಗರ, ಇಲಿಯಾಸ್ ಹಿಪ್ಪರಗಿ, ಜುಬೇರ್ ನಾಲ್ಬಂದ್, ಮಂಜು ಹೋಳಿಕಟ್ಟಿ, ಆಶಿಫ ತಾಂಬೊಳಿ,ಮಹೇಂದ್ರ ರಾಜಂಗಳೆ,ರಸುಲಸಾಬ ನದಾಫ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಗಣ್ಯರು ಭಾಗವಹಿಸಿ, ಹಬ್ಬವನ್ನು ಶಾಂತಿಯುತವಾಗಿ ನಡೆಸಿಕೊಡುವ ಭರವಸೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್