LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ





ಬಳ್ಳಾರಿ,ಏ.10 ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊAಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು, ಬುಧವಾರ ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.
ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್‌ಲೈನ್‌ನಲ್ಲಿ ದಾಖಲಿಸಿದರು.
ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.
ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್