LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಎಂಟಿಸಿಗೆ 4500 ಹೊಸ ಬಸ್ಸು ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿಎಂಟಿಸಿ ಸಾಕಷ್ಟು ಬಸ್ಸುಗಳಲ್ಲಿ ಹಾರ್ನ್ ಇಲ್ಲ, ಇಂಜಿನ್ ಸಮಸ್ಯೆ, ಗೇರ್ ಬಾಕ್ಸ್ ಬ್ರೇಕ್, ಕ್ಲಚ್ ಪ್ಯಾಡ್, ಹೀಗೆ ನಾನಾ ರೀತಿಯ ಸಮಸ್ಯೆ ಗಳಿದ್ದು, ಹೊಸ ಬಸ್​ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.





4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ. ಈ ಬಸ್ಸಿಗೆ ಡ್ರೈವರ್ ಬಸ್ ಕಂಪನಿ ಅವರಾದರೆ, ಕಂಡಕ್ಟರ್ ಬಿಎಂಟಿಸಿಯಿಂದ ಇರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್