ಬೆಂಗಳೂರು, ಅಕ್ಟೋಬರ್ 21: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ ಕ್ರಮ ಅಥವಾ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ದಿವಂಗತ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಮಧ್ಯಂತರ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪ್ರಮೋದಾ ದೇವಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೊಸ ಕಾಯ್ದೆಯ ಸೆಕ್ಷನ್ 16 ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿಗಳಿಗೆ ಸಭೆಯನ್ನು ನಡೆಸದೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. ಇದನ್ನು ಪ್ರಮೋದಾ ದೇವಿ ಪ್ರಶ್ನಿಸಿದ್ದಾರೆ.
ಅಂತೆಯೇ, ಸೆಕ್ಷನ್ 17 ರ ಅಡಿಯಲ್ಲಿ ಅಧ್ಯಕ್ಷರು ಸಭೆಯನ್ನು ನಡೆಸದೆ ಅಥವಾ ಸದಸ್ಯರ ನಡುವೆ ವಿಷಯವನ್ನು ಚರ್ಚಿಸದೆ ತುರ್ತು ಸಂದರ್ಭಗಳಲ್ಲಿ ಆದೇಶಗಳನ್ನು ಹೊರಡಿಸಲು ಅಧಿಕಾರವನ್ನು ನೀಡುತ್ತದೆ. ಇಂಥ ಪರಿಸ್ಥಿತಿಯಲ್ಲಿ ಪ್ರಾಧಿಕಾರದ ಸಭೆಯಲ್ಲಿ ಅಂತಹ ಆದೇಶಗಳನ್ನು ಮಂಡಿಸಿ ವಾಸ್ತವಿಕ ಅನುಮೋದನೆ ಪಡೆದುಕೊಳ್ಳಲಾಗುತ್ತದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.