LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ

ಬೆಂಗಳೂರು, (ನವೆಂಬರ್ 21): ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೊಂದೆಡೆ ನಾಯಕರು, ಕಾರ್ಯಕರ್ತರು ಕಾತರದಿಂದ ಕಾಯುತ್ತಿದ್ದಾರೆ. ಬೊಂಬೆನಗರಿಯ ಉಪಚುನಾವಣೆಗೆ ಶೇ.88.81ರಷ್ಟು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಮತಗಳು ಚಲಾವಣೆಗೊಂಡಿರುವುದು, ಹೆಚ್ಚಿನ ಮುಸ್ಲಿಂ ಮತಗಳು, ಮಹಿಳಾ ಮತದಾರರೇ ಫಲಿತಾಂಶ ನಿರ್ಧರಿಸುವ ಅಂಶಗಳಾಗಿ ಪರಿಗಣಿತವಾಗುತ್ತಿದ್ದು, ಅವುಗಳ ಆಧಾರದ ಮೇಲೆಯೇ ಸೋಲು, ಗೆಲುವಿನ ಸಾಧ್ಯತೆಗಳು ಚರ್ಚೆಯಲ್ಲಿವೆ.

ಈಗಾಗಲೇ ಹೋಟೆಲ್‍ಗಳು, ಟೀ ಅಂಗಡಿಗಳು, ಸಾರ್ವಜನಿಕ ಸ್ಥಳಗಳು ಚರ್ಚಾ ತಾಣಗಳಾಗಿವೆ. ಇದರ ನಡುವೆ ಬೆಂಗಳೂರಿನ ಎನ್‌ಎಂಐಟಿಯ ಸೆಂಟರ್‌ ಫಾರ್‌ ಪಾಲಿಸಿ ಆ್ಯಂಡ್‌ ಗವರ್ನನ್ಸ್‌ ಸ್ಟಡೀಸ್‌ ಮತ್ತು ಲೋಕನೀತಿ ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ವಿಧಾನಸಭೆ ಕ್ಷೇತ್ರದ 20 ಮತಗಟ್ಟೆಗಳಲ್ಲಿ ತಲಾ 25 ಮತದಾರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇದರೊಂದಿಗೆ ಒಟ್ಟು 502 ಜನರಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಲಾಗಿದೆ. ಮುಖಾಮುಖಿ ಸಂದರ್ಶನದ ಮೂಲಕ ಚುನಾವಣೋತ್ತರ ಟ್ರೆಂಡ್‌ ಬಗ್ಗೆ ವರದಿ ತಯಾರಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್