LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಲ್ಹಾದ ಪಾಂಡವರಿಗೆ “ಚರ್ಮಶ್ರೀ” ಪ್ರಶಸ್ತಿ

 

ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾದರಕ್ಷೆ ಹಾಗೂ ಚರ್ಮ ಉದ್ಯೋಗವನ್ನು ಅಭಿವೃದ್ಧಿಪಡಿಸಲು ನವೀನ ತಂತ್ರಜ್ಞಾನ, ಉತ್ತಮ ವಿನ್ಯಾಸ ಹಾಗೂ ಸಮರ್ಪಕ ಮಾರುಕಟ್ಟೆ ವ್ಯವಸ್ಥೆ ಅತ್ಯಂತ ಅಗತ್ಯವಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾ ಅಧ್ಯಕ್ಷ ಭೀಮರಾವ ಪವಾರ ಹೇಳಿದರು.

ನೆಹರುನಗರದಲ್ಲಿರುವ ಕನ್ನಡ ಭವನದಲ್ಲಿ ಪ್ರೋತ್ಸಾಹ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಸಮಗಾರ ಹರಳಯ್ಯ (ಚರ್ಮಕಾರ) ಸಮಾಜದ ಸಮಾವೇಶದಲ್ಲಿ ಪವಾರ ಮೇಲಿನಂತೆ ಅಭಿಪ್ರಾಯ ಪಟ್ಟರು.

ಮುಂದೆ ಮಾತನಾಡುತ್ತ ಪವಾರ, ಸರಿಯಾದ ಯೋಜನೆ, ಪರಿಶ್ರಮ ಹಾಗೂ ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಚರ್ಮ ಉದ್ಯಮ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಚರ್ಮೋದ್ಯಮ ಕ್ಷೇತ್ರದಲ್ಲಿ ನೀಡಿದ ಮಹತ್ವದ ಸೇವೆಯನ್ನು ಗುರುತಿಸಿ ಪ್ರಲ್ಹಾದ ಪಾಂಡವ ಅವರಿಗೆ “ಚರ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಅವರ ಧರ್ಮಪತ್ನಿ ತುಳಸಾಬಾಯಿ ಪಾಂಡವ ಅವರನ್ನೂ ಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಅನ್ನಾಸಾಹೇಬ ಎಸ್. ರಾಯಮಾನೆ, ಮಾರಿಷಸ್ನ ಅನ್ನಾ ಮೆಡಿಕಲ್ ಕಾಲೇಜಿನ ನಿವೃತ್ತ ಡೀನ್ ಡಾ. ಮೋಹನ್ ಉಳ್ಳಿಕಾಶಿ, ಬೆಳಗಾವಿ ಪೊಲೀಸ್ ಉಪ ಆಯುಕ್ತ ಸದಾಶಿವ ಕಟ್ಟಿಮನಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಲೆದರ್ ಆರ್ಟಿಸನ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಅಧ್ಯಕ್ಷ ಸಂತೋಷ ಹೊಂಗಲ, ವಾಸುದೇವ ದೋಡಮನಿ, ಸಾಗರ ಕಿತ್ತೂರು, ಚಂದ್ರಕಾಂತ ಲೋಕರೆ, ಡಾ. ಶಿವಾನಂದ ದೊಡ್ಡಮನಿ, ಮಲ್ಲಿಕಾರ್ಜುನ ತಾಳಿಕೋಟಿ, ಶಂಕರ ಕಾಂಬಳೆ, ಶ್ರೀಮತಿ ರೂಪಾಲಿ ಸಂತೋಷಕುಮಾರ್ ಡಿ, ರವಿ ಹೊಂಗಲ, ಡಾ. ಚಂದ್ರಕಾಂತ ವಾಘಮಾರೆ, ಆನಂದ ಸೌದತ್ತಿ, ಹೀರಾಲಾಲ್ ಚವ್ಹಾಣ, ಸಂಜೀವ ಲೋಕಾಪುರ, ಜಿ.ಬಿ. ವಾಘಮಾರೆ, ಲತಾ ಮಾನೆ , ರೇಖಾ ದೊಡಮನಿ, ಸಂಗೀತಾ ಸಾಂಗಲಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ತಾಳಿಕೋಟಿ ನಿರೂಪಿಸಿದರು. ಸುರೇಶ್ ಸಾಂಗಲಿ ವಂದಿಸಿದರು
-೦-೦-೦-

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್