LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಕ್ಕಳ ಚಿತ್ರ ಪಂಚ ರತ್ನಗಳು

     ಪ್ರದರ್ಶಕ ಮತ್ತು ವಿತರಕರಾಗಿರುವ ಜಿ.ಆರ್.ನಾರಾಯಣ ಗೌಡ ಅವರು  ಶ್ರೀಕ್ಯಾಲಮ್ಮ ದೇವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಒಂದಷ್ಟು ಚಿತ್ರಗಳಲ್ಲಿ ನಟನೆ ಮಾಡಿರುವ ಮೈಸೂರು ಮೂಲದ ಗಾಯಕ ಗೌತಮ್ ಆರ್. ಚಿತ್ರಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಮೂರು ಹಾಡುಗಳಿಗೆ ಸಾಹಿತ್ಯ ಬರೆದು ಎರಡನೇ ಬಾರಿ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

     ತಾರಾಗಣದಲ್ಲಿ ಚಿಣ್ಣರಾದ ಪ್ರಥಮ್, ಯಶಸ್, ವಿಹಾನ್, ತನ್ವಿ, ಆಧ್ಯ ಪ್ರಥಮ್, ತಾಯಿಯಾಗಿ ಬಿಂದೂ ಆಚಾರ್ಯ, ಶಿಕ್ಷಣ ಸಚಿವರಾಗಿ ಆನಂದ್ ನಗರ್ಕರ್ ಮುಂತಾದವರು ಅಭಿನಯಿಸಿದ್ದಾರೆ.

     ಸಂಗೀತ ಪ್ರಣವ್, ಛಾಯಾಗ್ರಹಣ ಅನಿಲ್ ಕಶ್ಯಪ್, ಸಂಕಲನ ಅಭಿಷೇಕ್, ಸಿಂಕ್ ಸೌಂಡ್ ಅಜಿತ್, ಪೋಸ್ಟ್ ಪ್ರೊಡಕ್ಷನ್ ಕ್ರಿಷ್ ಸ್ಟುಡಿಯೋಸ್ ಅವರದಾಗಿದೆ. ವೆಂಕಟ್‌ಗೌಡ ಸಾರಥ್ಯದಲ್ಲಿ ಸುಮಾರು 60 ಕೇಂದ್ರಗಳಲ್ಲಿ ಸಿನಿಮಾವು ಸದ್ಯದಲ್ಲೇ ತೆರೆಗೆ ಬರಲಿದೆ.

      ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಇಂದಿನ ಸಮಾಜದ ದೈನಂದಿಕ ಸಮಸ್ಯೆಗಳನ್ನು ದೊಡ್ಡವರು ಗಮನಕ್ಕೆ ತೆಗೆದುಕೊಳ್ಳದೆ ಇರುವುದರಿಂದ ವಿಷಯವು ಸರ್ಕಾರಕ್ಕೆ ತಲುಪದೆ ಇರುವುದರಿಂದ ಯಾರನ್ನು ದೂರುವುದರಿಂದ ಪ್ರಯೋಜನವಿಲ್ಲ. ಇದನ್ನು ಅರಿತ ಐದು ಮಕ್ಕಳು ನಾವೇ ಮುಂದಾಗಿ ಏಕೆ ಸರಿಪಡಿಸಬಾರದು ಅಂತ ತೀರ್ಮಾನಕ್ಕೆ ಬರುತ್ತಾರೆ. ಪ್ರಾರಂಭದಲ್ಲಿ ’ಪಂಚ ಭೂತಗಳು’ ಹೆಸರು ಇಡಲಾಗಿತ್ತು. ವಿತರಕ ವೆಂಕಟ್‌ಗೌಡ ಶೀರ್ಷಿಕೆ ನಕರಾತ್ಮಕ ಸಂದೇಶ ಸಾರುವುದರಿಂದ ’ಪಂಚ ರತ್ನಗಳು’ ಸೂಕ್ತವಾಗಿದೆ ಎಂದು ಸಲಹೆ ನೀಡಿದ್ದರಿಂದ ಅದನ್ನೆ ಇಡಲಾಯಿತು. ಪ್ರಕೃತಿಯ ಅಂಶಗಳಾದ ಭೂಮಿ, ನೀರು, ಬೆಂಕಿ, ಗಾಳಿ, ಆಕಾಶ ಇವುಗಳನ್ನು ಭುವನ್, ಜೀವಿತ, ಜ್ಯೋತಿ, ಅನಿಲ್ ಹಾಗೂ ಆಕಾಶ್ ಪಾತ್ರದ ಹೆಸರಿನಲ್ಲಿ ಬಿಂಬಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ" ಎಂದು ಮಾಹಿತಿಯನ್ನು ಗೌತಮ್ ಆರ್. ತೆರೆದಿಟ್ಟರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್