LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೌಡಿಶೀಟರ್​​ಗಳ ನಡುವೆ ಮಾರಾಮಾರಿ; ಪೊಲೀಸರ ಗುಂಡೇಟು

ಹುಬ್ಬಳ್ಳಿ, ಆಗಸ್ಟ್​ 19: ನಗರದಲ್ಲಿ ತಡರಾತ್ರಿ ರೌಡಿಶೀಟರ್​​ಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಗುಂಡು ಹಾರಿಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್​ಗಳಾದ ಜಾವೂರ್ ಮತ್ತು ಅಫ್ತಾಬ್​ ಕರಡಿಗುಡ್ಡ ನಡುವೆ ತಡರಾತ್ರಿ ಮಾರಾಮಾರಿ ನಡೆದಿದೆ. ಗಲಾಟೆ ವೇಳೆ ರೌಡಿಶೀಟರ್ ಅಫ್ತಾಬ್​ ಕರಡಿಗುಡ್ಡ ರೌಡಿಶೀಟರ್ ಜಾವೂರ್​ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದನು.

ವಿಚಾರ ತಿಳಿದು ಸೋಮವಾರ ಬೆಳಗ್ಗೆ ಪೊಲೀಸರು ರೌಡಿಶೀಟರ್ ಅಫ್ತಾಬ್​ನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಕಸಬಾಪೇಟೆ ಪೊಲೀಸರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಅಫ್ತಾಬ್​ ಕರಡಿಗುಡ್ಡ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಾಳು ರೌಡಿಶೀಟರ್ ಅಫ್ತಾಬ್​ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯ ಮದಿನಿ ಕಾಲೋನಿಯಲ್ಲಿ ಇಬ್ಬರು ಅಪ್ತಾಪ್ತ ಬಾಲಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಸಲೀಂ ಚಾಕು ಇರಿದ ಅಪ್ರಾಪ್ತ ಬಾಲಕ. ಮೊಹಮ್ಮದ್ ಸೋಫಿಯಾನ್ ಗಾಯಾಳು. ಗಾಯಗೊಂಡ ಮೊಹಮ್ಮದ್​ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ಅಪ್ರಾಪ್ತ ಬಾಲಕ ಸಲೀಂನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕನ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾತನಾಡಿ, 15 ವರ್ಷದ ಬಾಲಕನಿಗೆ ಚಾಕು ಇರಿಯಲಾಗಿದೆ. ಪರಿಚಯಸ್ಥ ಹುಡಗನಿಗೆ ಚಾಕು ಇರಿಯಲಾಗಿದೆ. ಚಾಕು ಇರಿದು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಹತ್ತು ಸಾವಿರ ಸಾಲದ ವಿಷಯಕ್ಕಾಗಿ ಗಲಾಟೆ ನಡೆದಿದೆ. ಸಾಲಕ್ಕೆ ಪ್ರತಿಯಾಗಿ ಒಂದು ಸಾವಿರ ಬಡ್ಡಿ ಕಟ್ಟಬೇಕಿತ್ತು. ಅಪ್ರಾಪ್ತರನ್ನು ಬಳಸಿಕೊಂಡು ಕೆಲವರು ಬಡ್ಡಿ ವ್ಯವಹಾರ ಮಾಡುತ್ತಿದ್ದಾರೆ. ಚಾಕು ಇರಿದ ಸಲೀಂ ಸೇರಿ ಐವರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಅಪ್ರಾಪ್ತರು. ಬಡ್ಡಿ ಹಣ ನೀಡಿದ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್