LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ತಾಲೂಕ ಪಂಚಾಯತ  ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸತ್ತಿಗೇರಿ ಗ್ರಾಮ ಪಂಚಾಯತ ಆವರಣ ಸ್ವಚ್ಛತೆ

 

 

ಯರಗಟ್ಟಿ : ಜಿಲ್ಲಾ ಪಂಚಾಯತ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ ಶಿಂಧೆ ರವರವ ನಿರ್ದೇಶನದಂತೆ ಯರಗಟ್ಟಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಹಾಗೂ ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನದ ಶನಿವಾರದಂದು  ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ 

ಮಾನ್ಯ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕ ಪಂಚಾಯತ ಆವರಣದಲ್ಲಿ ಹಾಗೂ  ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬುದು ಕಾರ್ಯಕ್ರಮದ ಉದ್ದೇಶವಾಗಿದೆ. ತಾಪಂನ ಅಧೀನದ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯಾಲಯಗಳ ಆವರಣದಲ್ಲಿ ಪರಿಸರಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.

ಬಳಿಕ ಯರಗಟ್ಟಿ ತಾಲೂಕ ಪಂಚಾಯತಿಯಿಂದ ಸತ್ತಿಗೇರಿ ಆವರಣದಲ್ಲಿ ತಾಲೂಕ ಪಂಚಾಯತ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾಲೂಕ ಪಂಚಾಯತ ಆವರಣವನ್ನು ಸ್ವಚ್ಛಗೊಳಿಸಿದರು. ತಮ್ಮ ವಿಭಾಗದ ದಾಖಲಾತಿಗಳನ್ನು ಕೂಡ ಸೂಕ್ತ ರೀತಿಯಲ್ಲಿ ಹೊಂದಿಸಿಕೊಂಡರು. 

ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರಾದ ಆರ್. ಎ. ಪಾಟೀಲ, ಅಕ್ಷರ ದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ತಾ. ಪಂ. ವವ್ಯಸ್ಥಾಪಕರಾದೂ ಮಲ್ಲಿಕಾರ್ಜುನ ಕಂಬಿ, ಸತ್ತಿಗೇರಿ ಪಿಡಿಓ ಎ. ಬಿ. ಬಂಗಾರಿ, ಸಿದ್ದಪ್ಪ ಬೆಕ್ಕನ್ನವರ, ಚಂದ್ರಗೌಡ ಪಾಟೀಲ, ರಮೇಶ ಕೊಟ್ರಶೆಟ್ಟಿ, ಹಾಗೂ ತಾಲೂಕ ಪಂಚಾಯತ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್