LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವತಿಯಿಂದ ಕನ್ನಡ ಸಿನಿಮಾಗಳಿಗೆ ಒಟಿಟಿ ಯೋಜನೆ; ಚಂದನವನಕ್ಕೆ ಸಿಎಂ ಅಭಯ

ಕನ್ನಡ ಸಿನಿಮಾಗಳನ್ನು ಒಟಿಟಿಗಳು ನಿರ್ಲಕ್ಷ್ಯ ಮಾಡುತ್ತಿವೆ. ಕನ್ನಡ ಸಿನಿಮಾಗಳನ್ನು ಒಟಿಟಿಗಳು ಖರೀದಿಯೇ ಮಾಡುತ್ತಿಲ್ಲ ಎಂಬ ದೂರುಗಳು ಹಲವು ವರ್ಷಗಳಿಂದಲೂ ಕೇಳುತ್ತಲೇ ಬರುತ್ತಿದೆ. ಸ್ಟಾರ್ ನಟರ ಸಿನಿಮಾಗಳನ್ನು ಸಹ ಒಟಿಟಿಗಳು ಒಳ್ಳೆಯ ಬೆಲೆಗಳಿಗೆ ಖರೀದಿ ಮಾಡುತ್ತಿಲ್ಲ ಎಂಬ ದೂರು ಮೊದಲಿನಿಂದಲೂ ಇದೆ. ಕನ್ನಡ ಚಿತ್ರರಂಗದ ಹಲವು ನಿರ್ಮಾಪಕರು, ನಿರ್ದೇಶಕರುಗಳು ಈ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರ ಚಿತ್ರರಂಗದ ನೆರವಿಗೆ ಬಂದಿದೆ. ಸ್ವತಃ ರಾಜ್ಯ ಸರ್ಕಾರವೇ ಹೊಸದೊಂದು ಒಟಿಟಿ ಪ್ರಾರಂಭಕ್ಕೆ ಮುಂದಾಗಿದೆ.

ಅಸಲಿಗೆ ಸರ್ಕಾರದ ವತಿಯಿಂದ ಒಟಿಟಿ ಪ್ರಾರಂಭ ಯೋಜನೆ ಹೊಸದೇನಲ್ಲ. ಈ ಹಿಂದಿನ ಬಜೆಟ್​​ನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಒಟಿಟಿ ಸ್ಥಾಪನೆ ಬಗ್ಗೆ ಉಲ್ಲೇಖಿಸಿದ್ದರು. ಇದೀಗ ಒಟಿಟಿ ಸ್ಥಾಪನೆಗೆ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿಯು ಒಟಿಟಿ ನಿರ್ಮಾಣ ಅದರ ಕಾರ್ಯವೈಖರಿ ಇನ್ನಿತರೆಗಳ ಬಗ್ಗೆ ವಿವರವಾದ ನೀಲನಕ್ಷೆಯನ್ನು ತಯಾರು ಮಾಡುತ್ತಿದೆ. ಒಟಿಟಿ ನಿರ್ಮಾಣಕ್ಕೆ ತಗಲುವ ವೆಚ್ಚ, ಸರ್ಕಾರದಿಂದ ಬೇಕಾಗುವ ಅನುದಾನ ಇನ್ನಿತರೆಗಳ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆಯ ಆಯುಕ್ತರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.







ಈ ಸಮಿತಿಯಲ್ಲಿ ಕಂಠೀರವ ಸ್ಟುಡಿಯೋದ ಚೇರ್​​ಮ್ಯಾನ್ ಮೆಹಬೂಬ್ ಪಾಷಾ, ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಸಿನಿಮಾ ನಿರ್ಮಾಪಕ ಕೆಪಿ ಶ್ರೀಕಾಂತ್, ರಾಕ್​​ಲೈನ್ ವೆಂಕಟೇಶ್, ಸಿನಿಮಾ ನಟ, ನಿರ್ದೇಶಕ ದುನಿಯಾ ವಿಜಯ್, ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸೋಜಾ ಇನ್ನೂ ಕೆಲವರು ಇದ್ದಾರೆ.

2024 ರಲ್ಲಿ ನೆರೆಯ ಕೇರಳದಲ್ಲಿ ಅಲ್ಲಿನ ರಾಜ್ಯ ಸರ್ಕಾರವು ಒಟಿಟಿ ಫ್ಲ್ಯಾಟ್​​ಪಾರ್ಮ್ ನಿರ್ಮಾಣ ಮಾಡಿತು. ಸಿ ಸ್ಪೇಸ್ ಹೆಸರಿನ ಈ ಒಟಿಟಿ ಪ್ಲ್ಯಾಟ್​​ಫಾರ್ಮ್ ಕೇವಲ ಮಲಯಾಳಂ ಸಿನಿಮಾಗಳನ್ನು ಮಾತ್ರ ಪ್ರದರ್ಶಿಸುತ್ತಿದ್ದು, ಚಿತ್ರರಂಗಕ್ಕೆ ನೆರವು ನೀಡಲೆಂದು ಪ್ರಾರಂಭವಾದ ಒಟಿಟಿ ಇದಾಗಿದೆ. ಈ ಒಟಿಟಿಯಿಂದಾಗಿ ಕಡಿಮೆ ದರಕ್ಕೆ ಮಲಯಾಳಂ ಸಿನಿಮಾಗಳನ್ನು ಪ್ರೇಕ್ಷಕರು ನೋಡುವಂತಾಗಿದೆ. ಇ ಒಟಿಟಿಯು ಪೇ-ಪರ್-ವೀವ್ ಮಾಡೆಲ್​​​ ಮೇಲೆ ಕೆಲಸ ಮಾಡುತ್ತಿದೆ. ಎಷ್ಟು ಹಣ ಬರುತ್ತದೆಯೋ ಅದರಲ್ಲಿ 50% ಅನ್ನು ನಿರ್ಮಾಪಕರಿಗೆ ನೀಡಲಾಗುತ್ತದೆ. ಇದೇ ಮಾದರಿಯ ಒಟಿಟಿ ಕನ್ನಡಕ್ಕಾಗಿಯೂ ನಿರ್ಮಾಣ ಆಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್