LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯ

ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ

ಬೆಂಗಳೂರು ಸೆ 5 : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ ಎಂದರು.

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ ಎಂದರು.

ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ.

ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾತಿಗಳು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್