ಬೆಂಗಳೂರು, ಡಿಸೆಂಬರ್ 6: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಶುಕ್ರವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಗೆ ಬಂದಿದೆ. ಬಾಣಂತಿಯರ ಸಾವಿನ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ‘ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಬಾಣಂತಿಯರ ಸಾವಿನ ಬಗ್ಗೆ ಗಹನವಾದ ಚರ್ಚೆಯಾಗಿದೆ. ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಳ್ಳಾರಿ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ. ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ಇಲ್ಲ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.