LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಂದೆಯೂ ನುಡಿದಂತೆಯೇ ನಡೆಯುವೆವು: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು,20: ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸರ್ಕಾರ ಒಂದು ವರ್ಷ ಪೂರೈಸಿದ ಸಂಬಂಧ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದ ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದಿದ್ದಾರೆ.






ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು ಎಂದು ಸಿಎಂ ತಿಳಿಸಿದ್ದಾರೆ.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ ಎಂದಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ