LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ: ಸಿ.ಎಂ.ಸಿದ್ದರಾಮಯ್ಯ 







ಚಿಕ್ಕಬಳ್ಳಾಪುರ, ಏ 18: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.‌


ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.


ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದರು.


NDA ಅಭ್ಯರ್ಥಿ ಸುಧಾಕರ್  ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದರು.


ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ: ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ.


ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಘೋಷಿಸಿದರು.


*ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಲಕ್ಷ ನಿರುದ್ಯೋಗ ಭತ್ಯೆ ಸಿಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು. ಪ್ರಧಾನಿ ಮೋದಿಯವರ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರದಥಿಕತೆಯನ್ನು ಪುನರ್ ಸ್ಥಾಪಿಸಲಾಗುವುದು. ನೂರಕ್ಕೆ ನೂರು ಈ ಬಾರಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಇವರಿಗೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದು ಕೋರಿದರು.



















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ